ಅಪರಾಧ
ಬೆಂಗಳೂರಿನಲ್ಲಿ 7.11 ಕೋಟಿ ದರೋಡೆ: ಶಂಕಿತರ ಭಾವಚಿತ್ರ ಬಿಡುಗಡೆ
ಬೆಂಗಳೂರಿನಲ್ಲಿ ಹಾಡಹಾಗಲೇ 7 ಕೋಟಿ 11 ಲಕ್ಷ ರೂ. ದರೋಡೆ ಮಾಡಿದ ಶಂಕಿತ ಆರೋಪಿಗಳ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನ ಡೇರಿ ಸರ್ಕಲ್ ಮೇಲ್ಸುತುವೆ ಬಳಿ ಆರ್ ಬಿಐ ಅಧಿಕಾರಿಗಳ ಸೋಗಿನಲ್ಲಿ ಸಿಎಂಎಸ್ ವಾಹನ ತಡೆಗಟ್ಟಿದ 7ರಿಂದ 8 ಮಂದಿಯ ಗ್ಯಾಂಗ್ ವಾಹನದಲ್ಲಿದ್ದ 7.11 ಕೋಟಿ ರೂ. ನಗದು ಹಣವನ್ನು ತಮ್ಮ ವಾಹನಕ್ಕೆ ತುಂಬಿಕೊಂಡು ಪರಾರಿಯಾಗಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಈ ಘಟನೆಯ ಮಾಹಿತಿ ಪಡೆದ ಪೊಲೀಸರು ಸಿಎಂಎಸ್
ಚಳಿ ತಡೆಯಲಾಗುತ್ತಿಲ್ಲ, ಬೆಡ್ಶೀಟ್ ಕೊಡಿಸಿ: ನಟ ದರ್ಶನ್ ಜಡ್ಜ್ಗೆ ಮನವಿ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಜೈಲಿನಲ್ಲಿರುವ ನಟ ದರ್ಶನ್ ಬೆಡ್ಶೀಟ್ಗಾಗಿ ಕೋರ್ಟ್ನಲ್ಲಿ ಬೇಡಿಕೆ ಇಟ್ಟಿದ್ದಾರೆ. ಚಳಿ ತಡೆಯಲಾಗುತ್ತಿಲ್ಲ, ಈ ಕಾರಣ ನಿದ್ದೆ ಬರುತ್ತಿಲ್ಲ, ಬೆಡ್ಶೀಟ್ ಕೊಡಿಸಿ ಎಂದು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದಾರೆ. ಪ್ರಕರಣದ ವಿಚಾರಣೆ ಸಂಬಂಧ ಪರಪ್ಪನ ಅಗ್ರಹಾರ
ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ: 11 ಜನರ ಸಾವಿಗೆ ಆರ್ಸಿಬಿಯೇ ಹೊಣೆಯೆಂದು ಸಿಐಡಿ ಚಾರ್ಜ್ಶೀಟ್
ಆರ್ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತದಿಂದ 11 ಜನ ಮೃತಪಟ್ಟ ಪ್ರಕರಣದ ತನಿಖೆ ಮುಗಿಸಿ ಚಾರ್ಜ್ಶೀಟ್ ಸಲ್ಲಿಕೆಗೆ ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಚಾರ್ಜ್ ಶೀಟ್ ಸಲ್ಲಿಕೆಗೆ ಹೈಕೋರ್ಟ್ ಸಮ್ಮತಿಸಿದೆ. 2,200ಕ್ಕೂ ಅಧಿಕ ಪುಟಗಳ ಚಾರ್ಜ್ಶೀಟ್ನಲ್ಲಿ ಈ ಸಾವುಗಳಿಗೆ
ಬೆಂಗಳೂರಿನಲ್ಲಿ ಹಾಡುಹಗಲೇ 7.11 ಕೋಟಿ ರೂ. ಬ್ಯಾಂಕ್ ಹಣ ದರೋಡೆ
ಬೆಂಗಳೂರಿನಲ್ಲಿ ಹಾಡುಹಗಲೇ ದುಷ್ಕರ್ಮಿಗಳು 7.11 ಕೋಟಿ ರೂ. ನಗದು ದರೋಡೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಜಯದೇವ ಡೇರಿ ಸರ್ಕಲ್ ಬಳಿ ಮಂಗಳವಾರ ಒಂದು ವಾಹನದಿಂದ ಮತ್ತೊಂದು ವಾಹನಕ್ಕೆ ಹಣ ಶಿಫ್ಟ್ ಮಾಡಿಕೊಂಡು ದುಷ್ಕರ್ಮಿಗಳ ಗುಂಪು ಹಣ ದರೋಡೆ ಮಾಡಿ ಪರಾರಿಯಾಗಿದೆ.
ಮಗನಿಗೆ ಐಸಿಸ್ ಸೇರಲು ಬ್ರಿಟನ್ನಲ್ಲಿರುವ ಕೇರಳ ನರ್ಸ್ ಒತ್ತಾಯ: ದೂರು ದಾಖಲು
ಬ್ರಿಟನ್ನಲ್ಲಿ ನರ್ಸ್ ಆಗಿರುವ ಕೇರಳದ ಮಹಿಳೆ ತನ್ನ ಮಗನಿಗೆ ಸ್ನೇಹಿತನ ಜೊತೆ ಐಸಿಸ್ಗೆ ಸೇರಲು ಒತ್ತಾಯಿಸಿದ್ದ ಆರೋಪ ಕೇಳಿ ಬಂದಿದೆ. ಬಾಲಕ ಬ್ರಿಟನ್ನಿಂದ ಕೇರಳಕ್ಕೆ ಹಿಂದಿರುಗಿದ್ದು ಚಿಕ್ಕಪ್ಪನಿಗೆ ವಿಷಯ ತಿಳಿಸಿ, ತನ್ನ ತಾಯಿಯ ಸ್ನೇಹಿತ ಐಸಿಸ್ ಸಂಬಂಧಿತ ವೀಡಿಯೊಗಳನ್ನು ತೋರಿಸಿದ್ದಾನೆ ಮತ್ತು
ಸ್ಕ್ಯಾನಿಂಗ್ ಸೆಂಟರ್ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯ ರಕ್ಷಿಸಿದ ಪಿಎಸ್ಐ ವಿರುದ್ಧ ಪ್ರತಿಭಟನೆ
ಬೆಂಗಳೂರು ಹೊರವಲಯದ ಆನೇಕಲ್ ಸ್ಕ್ಯಾನಿಂಗ್ ಸೆಂಟರ್ನಲ್ಲಿ ಮಹಿಳೆ ಮೇಲೆ ಸ್ಕ್ಯಾನಿಂಗ್ ವೇಳೆ ನಡೆಸಿದ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ರಕ್ಷಿಸಲು ಯತ್ನಿಸಿದ ಆರೋಪದಡಿ ಆನೇಕಲ್ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ತಿಪ್ಪೇಸ್ವಾಮಿ ವಿರುದ್ಧ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ನವೆಂಬರ್ 10ರಂದು ಹೊಟ್ಟೆ
ಗಂಡನ ಬಿಟ್ಟು ತವರಿಗೆ ಬಂದ ಮಗಳ ಮೇಲೆ ಮಚ್ಚಿನಿಂದ ಹಲ್ಲೆಗೈದ ತಾಯಿ
ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಅಗ್ರಹಾರ ಲೇಔಟ್ ಹರಿಹರೇಶ್ವರ ದೇವಸ್ಥಾನದ ಬಳಿ ತಾಯಿಯೊಬ್ಬರು ಮಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ರಮ್ಯ(22) ತಾಯಿಯಿಂದ ಗಂಭೀರ ಹಲ್ಲೆಗೆ ಒಳಗಾದ ಮಗಳು. ರಮ್ಯ ಪದೇ ಪದೆ ಗಂಡನ ಜೊತೆ ಜಗಳವಾಡಿ ತವರುಮನೆಗೆ ಬರುತ್ತಿದ್ದರು. ಮಂಗಳವಾರ
ಸಂಬಂಧಿಕನಿಂದ ಅತ್ಯಾಚಾರ: ಅಪ್ರಾಪ್ತ ವಯಸ್ಕ ಬಾಲಕಿ ಗರ್ಭಿಣಿ
ಯಾದಗಿರಿ ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಸಂಬಂಧಿಯಾಗಿರುವ ವ್ಯಕ್ತಿ ಅತ್ಯಾಚಾರ ನಡೆಸಿದ್ದು, ಆಕೆ ಗರ್ಭಿಣಿಯಾಗಿರುವ ವಿಚಾರ ಬಹಿರಂಗಗೊಂಡಿದೆ. ಬಾಲಕಿಯನ್ನು ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ಕರೆತಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆ ಯಾದಗಿರಿ ಜಿಲ್ಲಾ ಆಸ್ಪತ್ರೆಯೊಂದರಲ್ಲಿ
ಶಿವಮೊಗ್ಗ: ಲಾಡ್ಜ್ನಲ್ಲಿ ಬೆಂಕಿ ಹಚ್ಚಿಕೊಂಡ ಅನೈತಿಕ ಸಂಬಂಧದಲ್ಲಿದ್ದ ವಿವಾಹಿತ ಜೋಡಿ
ಅನೈತಿಕ ಸಂಬಂಧ ಹೊಂದಿದ್ದ ವಿವಾಹಿತ ಜೋಡಿಯೊಂದು ಜಗಳವಾಡಿ ಬೆಂಕಿ ಹಚ್ಚಿಕೊಂಡು ಮೈಕೈ ಸುಟ್ಟುಕೊಂಡು ಆಸ್ಪತ್ರೆ ಸೇರಿದ ಘಟನೆ ಶಿವಮೊಗ್ಗ ನಗರದ ಖಾಸಗಿ ಲಾಡ್ಜ್ನಲ್ಲಿ ನಡೆದಿದೆ. ಗೀತಾ ಮತ್ತು ಗಿರೀಶ್ ಬೆಂಕಿಯಿಂದ ಮೈಕೈ ಸುಟ್ಟು ಆಸ್ಪತ್ರೆಗೆ ದಾಖಲಾದವರು. ದಾವಣಗೆರೆಯವರಾದ ವಿವಾಹಿತೆ ಗೀತಾ ಹಾಗೂ
ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್: ವ್ಯಕ್ತಿಯಿಂದ 42 ಲಕ್ಷ ರೂ. ದೋಚಿದ ಸೈಬರ್ ವಂಚಕ
ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಹೆಸರಲ್ಲಿ ಸೈಬರ್ ವಂಚಕ ಬೆಂಗಳೂರಿನ ವ್ಯಕ್ತಿಯೊಬ್ಬರಿಂದ 42 ಲಕ್ಷ ರೂ. ದೋಚಿಕೊಂಡಿದ್ದಾನೆ. ಅಪರಿಚಿತ ವ್ಯಕ್ತಿ ಅಧಿಕ ಲಾಭದ ಆಮಿಷ ಒಡ್ಡಿದ್ದನ್ನು ನಂಬಿ ಹಣ ಹೂಡಿಕೆ ಮಾಡಿದ್ದ ವ್ಯಕ್ತಿ ಈಗ ಇದ್ದ ಹಣವೆಲ್ಲ ಕಳೆದುಕೊಂಡಿದ್ದಾರೆ. ವಂಚನೆಗೆ ಒಳಗಾಗಿರುವ ಬಗ್ಗೆ




