Menu

Covid: ಬೆಳಗಾವಿಯಲ್ಲಿ ಕೊರೋನಗೆ ವ್ಯಕ್ತಿ ಬಲಿ

ಬೆಳಗಾವಿ ಬಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತಪಾಸಣೆಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ರೋಗಿಯು ಚಿಕಿತ್ಸೆ ಫಲಿಸದೆ ತಡ ರಾತ್ರಿ ಮೃತಪಟ್ಟಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ದಾಖಲಾಗಿದ್ದ ಅವರಲ್ಲಿ ಕೊರೋನ ಪಾಸಿಟಿವ್‌ ಪತ್ತೆಯಾದ ಹಿನ್ನೆಲೆಯಲ್ಲಿ ಕೋವಿಡ್‌ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿತ್ತು. ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರವು ಆಸ್ಪತ್ರೆಗಳಲ್ಲಿ ಸಕಲ ವ್ಯವಸ್ಥೆಗಳನ್ನು ಸನ್ನದ್ಧಗೊಳಿಸುವಂತೆ ಆರೋಗ್ಯ

Heart Attack: ಹಾಸನದಲ್ಲಿ ಪದವಿ ವಿದ್ಯಾರ್ಥಿನಿ ಕುಸಿದು ಸಾವು

ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ಯುವತಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಮೃತ ಯುವತಿ ೨೧ ವರ್ಷದ ಕವನ ಅಂತಿಮ ವರ್ಷದ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ರಾಜ್ಯದಲ್ಲಿ ಇತ್ತೀಚೆಗೆ ಯುವ ಸಮೂಹದಲ್ಲಿ ಹೃದಯಾಘಾತದಿಂದ ಸಾವಿನ ಸಂಖ್ಯೆ ವರದಿಯಾಗುತ್ತಲೇ ಇದೆ. ನಿಂತಲ್ಲ,

ಬಿಬಿಎಂಪಿ ವ್ಯಾಪ್ತಿಯಲ್ಲಿ 700 ದಾಟಿದ ಡೆಂಗ್ಯು ಕೇಸ್

ಸಿಲಿಕಾನ್ ಸಿಟಿ ಬೆಂಗಳೂರು ಡೆಂಗ್ಯು ಹಾಟ್‌ಸ್ಪಾಟ್‌ ಆಗುತ್ತಿದ್ದು, ಆತಂಕ ಸೃಷ್ಟಿಸಿದೆ. ಕೋವಿಡ್‌ ಆತಂಕದ ಮಧ್ಯೆ ರಾಜ್ಯದಲ್ಲಿ ಡೆಂಗ್ಯು ಕೇಸ್‌ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಜ್ಯದ ಡೆಂಗ್ಯು ಪ್ರಕರಣಗಳಲ್ಲಿ ಬೆಂಗಳೂರಿನಲ್ಲೇ ಅರ್ಧದಷ್ಟು ಪ್ರಕರಣಗಳಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯ ಕೇಸ್‌ 700 ದಾಟಿದ್ದು,

ರಾಜ್ಯದಲ್ಲಿ ಕೋವಿಡ್‌ ಭೀತಿ: ಆರೋಗ್ಯ ಇಲಾಖೆಯಲ್ಲಿ ರಜೆ ಕಟ್‌

ರಾಜ್ಯದಲ್ಲಿ ಕೋವಿಡ್‌ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯ ರಜೆಯನ್ನು ಮೊಟಕುಗೊಳಿಸಲಾಗಿದೆ. ಪರಿಸ್ಥಿತಿ ತಿಳಿ ಆಗುವ ತನಕ ಯಾರಿಗೂ ರಜೆ ಕೊಡದಂತೆ ಆರೋಗ್ಯ ಇಲಾಖೆಗೆ ಸಿಎಂ ಸೂಚನೆ ನೀಡಿದ್ದಾರೆ. ಯಾವ ಸಿಬ್ಬಂದಿಯೂ ಕೇಂದ್ರ ಸ್ಥಾನ ಬಿಟ್ಟು ಹೋಗದಂತೆ ಸೂಚಿಸಲಾಗಿದೆ.

ಬೆಂಗಳೂರು ಗಾಂಧಿನಗರದಲ್ಲಿ ಟ್ರಾವೆಲ್‌ ಹಿಸ್ಟರಿ ಇಲ್ಲದ ವ್ಯಕ್ತಿಗೆ ಕೋವಿಡ್‌

ರಾಜ್ಯದಲ್ಲಿ ಕೊರೋನ ಸೋಂಕು ಪ್ರಕರಣ ಏರಿಕೆ ಕಾಣುತ್ತಿದ್ದು, ಬೆಂಗಳೂರಿನ ಗಾಂಧಿನಗರದ ಒಬ್ಬರಲ್ಲಿ ಪತ್ತೆಯಾಗಿದೆ. ಗಾಂಧಿನಗರದ 46 ವರ್ಷದ ವ್ಯಕ್ತಿಯಲ್ಲಿ ಕೊರೋನ ಪಾಸಿಟಿವ್ ಕಾಣಿಸಿಕೊಂಡಿದ್ದು, ಅವರು ಯಾವುದೇ ಟ್ರಾವೆಲ್ ಹಿಸ್ಟರಿ ಹೊಂದಿಲ್ಲ ಎಂಬುದು ಗಮನಾರ್ಹ. ಸೋಂಕಿತ ವ್ಯಕ್ತಿಯನ್ನು ಹೋಂ ಐಸೋಲೇಷನ್‌ನಲ್ಲಿ ಇರಿಸಿ ಚಿಕಿತ್ಸೆ

ಬೆಂಗಳೂರಿನಲ್ಲಿ ಕೋವಿಡ್‌ ಸದ್ದು, ರಾಜಾಜಿನಗರ, ಮಲ್ಲೇಶ್ವರಂನಲ್ಲಿ ಇಬ್ಬರಿಗೆ ಪಾಸಿಟಿವ್‌

ನಾಲ್ಕೈದು ವರ್ಷದ ಹಿಂದೆ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್‌ ಮತ್ತೆ ಸದ್ದು ಮಾಡುತ್ತಿದೆ. ಚೀನಾ ಮತ್ತು ಹಾಂಗ್‌ ಕಾಂಗ್‌ನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್‌ ಸೋಂಕು ಹೆಚ್ಚುತ್ತಿರುವಂತೆಯೇ ಭಾರತದಲ್ಲೂ ಪತ್ತೆಯಾಗಿದೆ. ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನ ಮಲ್ಲೇಶ್ವರಂ, ರಾಜಾಜಿನಗರದ ಇಬ್ಬರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.

Covid ಭೀತಿ: ಟೆಸ್ಟ್ ಆರಂಭಿಸಲು ಆರೋಗ್ಯ ಇಲಾಖೆ ಕ್ರಮ

ಮೂವರು ಮಕ್ಕಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 35 ಕೋವಿಡ್‌ ಪ್ರಕರಣಗಳು ದಾಖಲಾಗಿವೆ. 35 ಸಕ್ರಿಯ ಪ್ರಕರಣಗಳಲ್ಲಿ ಬೆಂಗಳೂರಿನಲ್ಲೇ 32 ಕೇಸ್ ದೃಢಪಟ್ಟಿದೆ. ದೇಶದಲ್ಲಿ ಕೋವಿಡ್‌ ಪ್ರಕರಣ ಮತ್ತೆ ಹೆಚ್ಚಾಗುತ್ತಿದ್ದಂತೆ ರಾಜ್ಯ ಸರ್ಕಾರ ಕೂಡ ಅಲರ್ಟ್‌ ಆಗಿದ್ದು, ಕ್ರಮಕ್ಕೆ ಮುಂದಾಗಿದೆ. ಬೆಂಗಳೂರು ವಾಣಿ

ಕೋವಿಡ್‌ ಅಲರ್ಟ್‌: ಆಂಧ್ರಪ್ರದೇಶದಲ್ಲಿ ಮಾಸ್ಕ್‌ ಕಡ್ಡಾಯ

ದೇಶಾದ್ಯಂತ ಕೋವಿಡ್‌ ಪ್ರಕರಣಗಳು ನೀಧಾನಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರವು ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ. ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ಆಂಧ್ರ ಪ್ರದೇಶದಲ್ಲಿ ಗುರುವಾರ ಒಂದೇ ದಿನ 19 ಪಾಸಿಟಿವ್‌

ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಕಿಮೋಥೆರಪಿ

  ಆರೋಗ್ಯ ಇಲಾಖೆಯು ಕ್ಯಾನ್ಸರ್‌ ರೋಗಿಗಳಿಗೆ ನೆರವಾಗುವ ಉದ್ದೇಶದೊಂದಿಗೆ ಇಂದಿನಿಂದ ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತ ಕೀಮೋಥೆರಪಿ ಕೇಂದ್ರಗಳನ್ನು ಆರಂಭಿಸುತ್ತಿದೆ. ಕೀಮೋ ಥೆರಪಿ ಅಗತ್ಯವಿರುವ ರೋಗಿಗಳಿಗೆ ಉಚಿತವಾಗಿ ಲಭ್ಯವಾಗಲಿದೆ.  ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಇರಲಿದೆ. ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ

ಕೆಫೀನ್‌ಮುಕ್ತ, ಆರೋಗ್ಯಕರ, ಅಗ್ಗ ಮತ್ತು ಸರಳ ನುಗ್ಗೆ ಸೊಪ್ಪು ಟೀ

ಆರೋಗ್ಯದ ದೃಷ್ಟಿಯಿಂದ ಕೆಫೀನ್‌ಮುಕ್ತ ಟೀ ಕುಡಿಯಬೇಕೆನ್ನುವವರಿಗೆ ನುಗ್ಗೆ ಸೊಪ್ಪು ಟೀ (ಮೊರಿಂಗಾ ಟೀ) ಉತ್ತಮ ಆಯ್ಕೆ. ರುಚಿಯನ್ನು ಸಮತೋಲನ ಗೊಳಿಸಿ ಸುವಾಸನೆಗಾಗಿ ಜೇನುತುಪ್ಪ, ಪುದೀನ ಮತ್ತು ದಾಲ್ಚಿನ್ನಿ ಯಾವುದಾದರೊಂದು ಸೇರಿಸಬಹುದು. ನುಗ್ಗೆ ಸೊಪ್ಪು ಹೆಚ್ಚಿನ ಪೌಷ್ಟಿಕಾಂಶವನ್ನು ಒಳ ಗೊಂಡಿದೆ. ಅಗತ್ಯವಾದ ಜೀವಸತ್ವಗಳು