ಆರೋಗ್ಯ
ಡಿಜಿಟಲ್ ಯುಗದಲ್ಲಿ ಯಾಕೆ ಹೆಚ್ಚುತ್ತಿದೆ ಬಂಜೆತನ
ಇಂದಿನ ಡಿಜಿಟಲ್ ಯುಗದಲ್ಲಿ ಸಾಫ್ಟ್ ವೇರ್ ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ವಲಯದ ಉದ್ಯೋಗಿಗಳನ್ನು ಗಂಭೀರ ಆರೋಗ್ಯ ಸಮಸ್ಯೆ ಕಾಡತೊಡಗಿದೆ. ಕಂಪ್ಯೂಟರ್, ಲ್ಯಾಪ್ ಟಾಪ್ ಹಾಗೂ ಸ್ಮಾರ್ಟ್ ಫೋನ್ ಗಳ ಅತಿಬಳಕೆ ಐಟಿ ಉದ್ಯೋಗಿಗಳಲ್ಲಿ ಸಂತಾನಹೀನತೆ ಅಥವಾ ಬಂಜೆತನದ ಸಮಸ್ಯೆಯನ್ನು ತಂದೊಡ್ಡುತ್ತಿರುವುದು ಬೆಳಕಿಗೆ ಬಂದಿದೆ. ಬಹುತೇಕ ಐಟಿ ಉದ್ಯೋಗಿಗಳು ತಮ್ಮ ಕೆಲಸದ ಅವಧಿಯ ಬಹುಪಾಲು ಸಮಯವನ್ನು ಕಂಪ್ಯೂಟರ್ ಪರದೆಯ ಮುಂಭಾಗದಲ್ಲೇ ಕಳೆಯಬೇಕಾದ ಅನಿವಾರ್ಯತೆ ಇದೆ. ಕಚೇರಿಯ ಅವಧಿಯಲ್ಲೇ ಇವರ ಸ್ಕ್ರೀನ್
ಐವಿಎಫ್, ಸರೊಗಸಿ ಚಿಕಿತ್ಸಾ ಕೇಂದ್ರಗಳಿಗೆ ಹೊಸ ನಿಯಮ
ಸಂತಾನೋತ್ಪತ್ತಿ ತಂತ್ರಜ್ಞಾನ ಹಾಗೂ ಐವಿಎಫ್ ಕೇಂದ್ರ, ವೀರ್ಯ ಬ್ಯಾಂಕುಗಳು ಪ್ರತಿ ಐದು ವರ್ಷಗಳಿಗೊಮ್ಮೆ ಹಾಗೂ ಸರೊಗಸಿ ಚಿಕಿತ್ಸಾ ಕೇಂದ್ರಗಳು ಪ್ರತಿ ಮೂರು ವರ್ಷಗಳಿಗೊಮ್ಮೆ ತಮ್ಮ ಪರವಾನಗಿ ಅಥವಾ ನೋಂದಣಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ನವೀಕರಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಹೊಸ ನಿಯಮ ಜಾರಿಗೊಳಿಸಿದೆ.
ಕೊಡಚಾದ್ರಿಗೆ ಟ್ರಕ್ಕಿಂಗ್ ಹೋಗಿದ್ದ ಬಾಮಾ ಹರೀಶ್ ಪುತ್ರ ಉಲ್ಲಾಸ್ ಹೃದಯಾಘಾತಕ್ಕೆ ಬಲಿ
ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಹಾಗೂ ಕರ್ನಾಟಕ ಫಿಲಂ ಚೇಂಬರ್ ಮಾಜಿ ಅಧ್ಯಕ್ಷ ಬಾಮಾ ಹರೀಶ್ ಪುತ್ರ ಉಲ್ಲಾಸ್ (28) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಉಲ್ಲಾಸ್ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಗಿರಿಗೆ ಟ್ರಕ್ಕಿಂಗ್ಗೆ ತೆರಳಿದ್ದಾಗ ಹಠಾತ್ ಹೃದಯಾಘಾತಕ್ಕೆ ಒಳಗಾಗಿದ್ದು ನಗರ
ದೇವದುರ್ಗದಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಸ್ಟೇಬಲ್ ಕುಸಿದು ಸಾವು
ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ೩೭ ವರ್ಷದ ಪೊಲೀಸ್ ಕಾನ್ಸ್ಸ್ಟೇಬಲ್ ರೇಣುಕಾ ರಾಜ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಅವರು ಮೊಹರಂ ಹಬ್ಬದ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯದಲ್ಲಿದ್ದಾಗ ತೀವ್ರ ಎದೆನೋವು ಹಾಗೂ ಎಡೆಗೈ ಸೆಳೆತ ಕಾಣಿಸಿಕೊಂಡಿತ್ತು. ಅಸ್ವಸ್ಥಗೊಂಡ ಅವರನ್ನು
ಈ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದು ವೈದ್ಯನ ಪತ್ನಿ: ಸಾರ್ವಜನಿಕರ ಆರೋಪ
ಬಾಗಲಕೋಟೆಯ ಕಲಾದಗಿ ಪ್ರಾಥಮಿಕ ಆರೋಗ್ಯ ಕೇಂದ್ರದದಲ್ಲಿ ವೈದ್ಯನ ಬದಲು ಪತ್ನಿಯೇ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದಾಗಿ ಸಾರ್ವಜನಿಕರಿಂದ ಆರೋಪ ಕೇಳಿ ಬಂದಿದೆ. ಈ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿರುವುದು ಹೆಚ್. ವಿ. ಲೇಬಗಿರಿ. ಆಸ್ಪತ್ರೆಗೆ ಸಂಬಂಧಪಟ್ಟ ಯಾವುದೇ ಹುದ್ದೆಯಲ್ಲಿ ಇಲ್ಲದ
ಅಂಗವೈಕಲ್ಯ: ಯುವತಿಯ ಗರ್ಭಕೋಶ ತೆಗೆಸಲು ಹೈಕೋರ್ಟ್ ಅನುಮತಿ
ಅಂಗವೈಕಲ್ಯದ ಜೊತೆ ಬುದ್ಧಿ ಮಾಂದ್ಯತೆ ಹೊಂದಿರುವ ಹೊಂದಿರುವ ಇಪ್ಪತ್ತಮೂರು ವರ್ಷದ ಯುವತಿಯ ಗರ್ಭಾಶಯವನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದುಹಾಕಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆಯಲ್ಲಿ ಇದಕ್ಕೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆ ನಡೆಸುವಂತೆ ನ್ಯಾಯಾಲಯ ಆದೇಶಿಸಿದೆ. ಯುವತಿ ದಿನನಿತ್ಯದ
ಮೈಸೂರು ಕಾಲೇಜು ಕ್ಯಾಂಪಸ್ನಲ್ಲೇ ಕುಸಿದು ವಿದ್ಯಾರ್ಥಿ ಸಾವು
ಮೈಸೂರಿನ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್ನಲ್ಲೇ ವಿದ್ಯಾರ್ಥಿಯೊಬ್ಬರು ಹೃದಯಾಘಾತಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮಾದೇಶ್ ಮೃತಪಟ್ಟ ವಿದ್ಯಾರ್ಥಿ. ಇವರು ಮದ್ದೂರು ತಾಲೂಕಿನವರಾಗಿದ್ದು, ಮೈಸೂರು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್ನಲ್ಲಿ ಇದ್ದಕ್ಕಿದ್ದಂತೆ ಕುಸಿದುಬಿದ್ದಿದ್ದಾರೆ. ಕಾಲೇಜಿನ ಸಿಬ್ಬಂದಿ
ಹಿರಿಯೂರಿನಲ್ಲಿ ಹೃದಯಾಘಾತದಿಂದ ನಾಲ್ಕು ವರ್ಷದ ಮಗು ಸಾವು
ಎದೆ ಉರಿ ಎಂದು ಹೇಳಿದ ನಾಲ್ಕು ವರ್ಷದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗದ ಹಿರಿಯೂರಿನಲ್ಲಿ ನಡೆದಿದೆ. ಹಿರಿಯೂರು ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ ವೈಷ್ಣವ್ ಮೃತ ಬಾಲಕ. ವೈಷ್ಣವ್ ಎದೆ ಉರಿಯುತ್ತಿದೆ ಎಂದು ಪೋಷಕರಿಗೆ ತಿಳಿದ್ದು, ಕೂಡಲೇ
ಸಿರಪ್ ಖರೀದಿಗೆ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ
ಮೆಡಿಕಲ್ ಶಾಪ್ಗಳಲ್ಲಿ ಯಾವುದೇ ಸಿರಪ್ ಖರೀದಿಸಬೇಕಾದರೆ ಇನ್ನು ಮುಂದೆ ಕಡ್ಡಾಯವಾಗಿ ವೈದ್ಯರ ಪ್ರಿಸ್ಕ್ರಿಪ್ಷನ್ ತೋರಿಸಲೇಬೇಕು. ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಔಷಧದ ಗುಣಮಟ್ಟ ಮತ್ತು ರೋಗಿಗಳ ಸುರಕ್ಷತೆಯ ಉದ್ದೇಶದಿಂದ ವೈದ್ಯರ ಶಿಫಾರಸು
ನಿಪಾ ವೈರಸ್: ಕೇರಳ, ತಮಿಳುನಾಡು, ಕರ್ನಾಟಕ ಗಡಿಗಳಲ್ಲಿ ಅಲರ್ಟ್
ಕೇರಳದ ಕೋಝಿಕ್ಕೋಡ್ನಲ್ಲಿ ವ್ಯಕ್ತಿಗೆ ನಿಪಾ ವೈರಸ್ ತಗುಲಿರುವುದು ದೃಢಪಟ್ಟ ಬಳಿಕ ಕೇರಳ- ತಮಿಳುನಾಡು ಗಡಿಯಲ್ಲಿ ಆರೋಗ್ಯಾಧಿಕಾರಿಗಳು ಕಟ್ಟೆಚ್ಚರ ವಹಿಸಿದ್ದು, ಕರ್ನಾಟಕದ ಗಡಿಯಲ್ಲೂ ಹೆಚ್ಚಿನ ಅಲರ್ಟ್ ಕೈಗೊಳ್ಳಲಾಗಿದೆ. ಕೇರಳದಿಂದ ಬರುವ ಜನರಿಗೆ ಪರೀಕ್ಷೆ ನಡೆಸಿದ ನಂತರವೇ ತಮಿಳುನಾಡಿಗೆ ಪ್ರವೇಶಿಸಲು ಅವಕಾಶ ನೀಡಲಾಗುತ್ತಿದೆ. ಕೇರಳದೊಂದಿಗೆ




