Menu

ಮನೆ ಮುಂದೆ ನಿಂತಿದ್ದ ಶಿಕ್ಷಕ ಗುಡುಗು ಸಿಡಿಲಿನ ಅಬ್ಬರಕ್ಕೆ ಬೆಚ್ಚಿ ಹೃದಯಾಘಾತಕ್ಕೆ ಬಲಿ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ಏಕಾಏಕಿ ಆರಂಭಗೊಂಡ ಗುಡುಗು ಸಿಡಿಲಿನ ಅಬ್ಬರಕ್ಕೆ ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಮಲೆಕುಂಬಳೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ನಾಗರಾಜಪ್ಪ (56) ಮೃತಪಟ್ಟವರು. ಅವರು ಭಾನುವಾರ ರಾತ್ರಿ ನಾಗರಾಜಪ್ಪ ಮನೆಯ ಮುಂದೆ ನಿಂತಿದ್ದಾಗ ಅಬ್ಬರಿಸಿದ ಸಿಡಿಲಿನ ಶಬ್ದಕ್ಕೆ ಬೆಚ್ಚಿ ಹೃದಯಾಘಾತವಾಗಿ ಸ್ಥಳದಲ್ಲೇ ಅಸು ನೀಗಿದ್ದಾರೆ. ರಾಜ್ಯದ ಗದಗ-ಬೆಟಗೇರಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗುಡುಗು,

ಸೋನಿಯಾ ಗಾಂಧಿ ಮೇದಾಂತ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಸಣ್ಣ ಶಸ್ತ್ರಚಿಕಿತ್ಸೆಗಾಗಿ ಹರಿಯಾಣದ ಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೋನಿಯಾ ಗಾಂಧಿ ಕಳೆದೆರಡು ವರ್ಷದಿಂದ ಆಗಾಗ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದು, ದೆಹಲಿ ಸೇರಿದಂತೆ ಕೆಲವು ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಮಾರ್ಚ್ 2026ರಲ್ಲಿ

ಕನ್ನಡ ನಟ ದಿಲೀಪ್‌ರಾಜ್‌ ನಿಧನ

ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನರಾದರು. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೂ ಫಲಕಾರಿಯಾಗಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’,

ಭಾರತೀಯ ಸೇರಿ ಮೂವರು ಹಂಟಾ ವೈರಸ್‌ಗೆ ಬಲಿ

ಯೂರೋಪ್ ಕಡೆಗೆ ಸಾಗುತ್ತಿದ್ದ ಐಷಾರಾಮಿ ಹಡಗೊಂದರಲ್ಲಿ ಹಂಟಾ ವೈರಸ್‌ ಕಾಣಿಸಿಕೊಂಡಿದ್ದು, ಒಬ್ಬ ಭಾರತೀಯ ಸೇರಿದಂತೆ ಮೂವರನ್ನು ಬಲಿ ಪಡೆದಿದೆ ಎನ್ನಲಾಗಿದೆ. ದಕ್ಷಿಣ ಅಮೆರಿಕದಿಂದ ಯೂರೋಪ್ ಕಡೆಗೆ ಸಂಚರಿಸುತ್ತಿದ್ದ ‘ಎಂವಿ ಹೊಂಡುಯಸ್’ ಎಂಬ ಪ್ರವಾಸಿ ಹಡಗಿನಲ್ಲಿ ಈ ದುರಂತ ನಡೆದಿದೆ. ಹಡಗಿನಲ್ಲಿದ್ದ ಪ್ರಯಾಣಿಕರೊಬ್ಬರಿಗೆ ಏಕಾಏಕಿ

ರಾಜ್ಯಾದ್ಯಂತ ಪ್ಯಾಲಿಯೇಟಿವ್ ಕೇರ್ ಕೇಂದ್ರ: ಸಚಿವ ದಿನೇಶ್‌ ಗುಂಡೂರಾವ್‌

ಪ್ಯಾಲಿಯೇಟಿವ್ ಕೇರ್ ಕೇಂದ್ರವನ್ನು ರಾಜ್ಯಾದ್ಯಂತ ಪ್ರಾರಂಭಿಸುವ ಗುರಿಯಿದೆ, ಈಗಾಗಲೇ ಬೆಂಗಳೂರಿನಲ್ಲಿ ನಾಲ್ಕೈದು ಕಡೆ ಪ್ರಾರಂಭಿಸಲಾಗಿದೆ. ಈ ಯುನಿಟ್ ನಲ್ಲಿ ತಜ್ಞರ ತಂಡದಿಂದ ಹೊರರೋಗಿ ವಿಭಾಗ, ಡೇ ಕೇರ್ ವಿಭಾಗ, ಸುಸಜ್ಜಿತ ಒಳ ರೋಗಿ ವಿಭಾಗ ಮತ್ತು ಆಸ್ಪತ್ರೆಯಿಂದ 5-8 ಕಿಲೋ ವ್ಯಾಪ್ತಿಯಲ್ಲಿ

ಅರಿಶಿಣಪುಡಿಯಲ್ಲಿ ಸೀಸ: ಟೆಸ್ಟ್‌ಗೆ ಆದೇಶಿಸಿದ ಸರ್ಕಾರ

ಅರಿಶಿಣಪುಡಿಯಲ್ಲಿ ಕಲಬೆರಕೆ ಕುರಿತು ದೂರು ದಾಖಲಾಗುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಮಸಾಲೆ ಪೌಡರ್, ಅರಿಶಿಣ ಪುಡಿ ಪರೀಕ್ಷೆ ನಡೆಸುವುದಕ್ಕೆ ಸರ್ಕಾರ ಆದೇಶಿಸಿದೆ. ಅರಿಶಿಣ ಪುಡಿ ಮತ್ತು ಬೇರುಗಳಲ್ಲಿ ಸೀಸದ ಅಂಶ ಕಲಬೆರಕೆ ಮಾಡುತ್ತಿದ್ದಾರೆ ಎಂದು ಆಹಾರ ಸುರಕ್ಷತೆ ಮತ್ತು ಔಷಧಿ ನಿಯಂತ್ರಣ ಇಲಾಖೆಯಲ್ಲಿ

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರ ಸಾವು

ಮುಂಬೈನ ಪೈಧುನಿ ಪ್ರದೇಶದಲ್ಲಿ ರಾತ್ರಿ ಬಿರಿಯಾನಿ ತಿಂದ ನಂತರ ಕಲ್ಲಂಗಡಿ ಹಣ್ಣು ಸೇವಿಸಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಅವರು ತಿಂದಿದ್ದ ಬಿರಿಯಾನಿ ಅಥವಾ ಕಲ್ಲಂಗಡಿ ಹಣ್ಣಿನಲ್ಲಿ ವಿಷವಿತ್ತೇ ಅಥವಾ ಎರಡರ ಮಿಶ್ರಣವು ದೇಹದಲ್ಲಿ ಕೆಟ್ಟ ಪ್ರತಿಕ್ರಿಯೆ ಉಂಟುಮಾಡಿ ಸಾವಿಗೆ ದಾರಿಯಾಯತೇ

ಮೆದುಳಿನಲ್ಲಿ ರಕ್ತಸ್ರಾವ: ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಹಾಸನದ 25 ವರ್ಷದ ಸಾಫ್ಟ್‌ವೇರ್‌ ಎಂಜಿನಿಯರ್‌ ಯುವತಿ ಶ್ವೇತಾ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೇಲೂರು ತಾಲೂಕಿನ ಬಂಡಿಲಕ್ಕನಕೊಪ್ಪಲು ಗ್ರಾಮದ ಗಂಗಾಧರ್ ಮತ್ತು ಸರೋಜ ದಂಪತಿಯ ಮಗಳು ಶ್ವೇತಾ(25) ಮೃತಪಟ್ಟವರು. ಆಕೆ ಹಾಸನದ ಮ್ಯಾಗ್ನಾ ಕಂಪನಿಯಲ್ಲಿ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಹೊಲಿಗೆ ಹಾಕದೆ ಡಿಸ್ಟಾರ್ಜ್‌: ನರಳಿ ಪ್ರಾಣ ಬಿಟ್ಟ ರೋಗಿ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ (ಶಾಂತವೇರಿ ಗೋಪಾಲಗೌಡ ಆಸ್ಪತ್ರೆ) ವೈದ್ಯರ ಅಮಾನವೀಯತೆ ಮತ್ತು ನಿರ್ಲಕ್ಷ್ಯದಿಂದ ರೋಗಿಯು ನರಳಿ ಪ್ರಾಣಬಿಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಖಾಸಗಿ ಸಂಸ್ಥೆಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡಿಕೊಂಡಿದ್ದ 45 ವರ್ಷದ ಶಾ ನವಾಜ್‌ಗೆ ಮರ್ಮಾಂಗದಲ್ಲಿ ಗಡ್ಡೆ ಬೆಳೆದಿದ್ದ ಕಾರಣ

ಮನೆಗಳಿಗೆ ಕಲುಷಿತ ನೀರು: ಯಡ್ರಾಮಿಯಲ್ಲಿ ಸಾಂಕ್ರಾಮಿಕ ರೋಗ ಭೀತಿ

​ಯಡ್ರಾಮಿ ಪಟ್ಟಣದ 1 ಮತ್ತು 2ನೇ ವಾರ್ಡಿನ ಮನೆಗಳಿಗೆ ಕಲುಷಿತ  ಕಳೆದ ಕೆಲವು ದಿನಗಳಿಂದ ಕಲುಷಿತ ನೀರು ಪೂರೈಕೆಯಾಗುತ್ತಿರುವುದರಿಂದ ಜನರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಡಿಯುವ ನೀರಿನಲ್ಲಿ ಗಲೀಜು ಹಾಗೂ ದುರ್ವಾಸನೆ ನೀರು ಬರುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿಗಳು  ನಿರ್ಲಕ್ಷ್ಯ ವಹಿಸಿರುವುದಕ್ಕೆ ಸಾರ್ವಜನಿಕರು