Menu

Heart Attack: ಹಾಸನದಲ್ಲಿ ಮುಂದುವರಿದ ಹೃದಯಾಘಾತ ಸರಣಿ: ಮತ್ತೆ ಮೂವರು ಬಲಿ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವಿನ ಸರಣಿ ಮುಂದುವರಿದಿದ್ದು, ನಿನ್ನೆಯಿಂದ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಕಳೆದ 40 ದಿನಗಳಲ್ಲಿ ಜಿಲ್ಲೆಯಲ್ಲಿ 21 ಮಂದಿ ಹೃದಯಾಘಾತ ಮೃತಪಟ್ಟಿದ್ದಾರೆ. ಈ ಬೆಳವಣಿಗೆ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಭಾರತೀಯ ಸೇನೆಯ ಯೋಧ ರಜೆಗೆಂದು ಊರಿಗೆ ಬಂದಿದ್ದ ವೇಳೆ ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಅಸು ನೀಗಿದ್ದಾರೆ. ಹೊಳೆನರಸೀಪುರ ತಾಲೂಕಿನ ಆಲಗೊಂಡನಹಳ್ಳಿಯ

ಕೇದಾರನಾಥ ಹೆಲಿಕಾಪ್ಟರ್‌ ಪತನ: ಕೊರಗಿನಲ್ಲಿದ್ದ ಮೃತ ಪೈಲಟ್‌ ತಾಯಿಯ ಸಾವು

ಕೇದಾರನಾಥದಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಮೃತಪಟ್ಟಿರುವ ಪೈಲಟ್ ರಾಜ್​ವೀರ್ ಸಿಂಗ್ ಚೌಹಾಣ್ ಅವರ ತಾಯಿ ಅಸು ನೀಗಿದ್ದಾರೆ. ಮಗನ ಸಾವಿನ ಸುದ್ದಿ ಕೇಳಿ ದುಃಖದಿಂದ ಕುಸಿದು ಹೋಗಿದ್ದ ತಾಯಿ 13 ದಿನಗಳ ನಂತರ ಸಾವಿಗೀಡಾಗಿದ್ದಾರೆ. ಮಗನ ಸಾವಿನ ಆಘಾತದಿಂದ ರಾಜ್‌ವೀರ್ ತಾಯಿ

Heart Attack: ಜಮಖಂಡಿಯಲ್ಲಿ ಪಾಠ ಮಾಡುವಾಗಲೇ ಕುಸಿದು ಶಿಕ್ಷಕ ಸಾವು

ಬಾಗಲಕೋಟೆಯ ಜಮಖಂಡಿಯಲ್ಲಿರುವ ತುಂಗಳ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ. ಮಕ್ಕಳು ಹಾಗೂ ಯುವಜನರು ಇದ್ದಕ್ಕಿದ್ದಂತೆ ಕುಸಿದು ಸಾವಿಗೀಡಾಗುತ್ತಿರುವ ಪ್ರಕರಣಗಳು ರಾಜ್ಯಾದ್ಯಂತ ಪ್ರತಿ ದಿನ ವರದಿಯಗುತ್ತಲೇ ಇವೆ. ಈ ಬಗ್ಗೆ ಅಧ್ಯಯನ ನಡೆಸಿದ ಸಮಿತಿಯು ಸರ್ಕಾರಕ್ಕೆ

ಭಾರತದಲ್ಲಿ ‘ವೆಗೋವಿ’ ಬಿಡುಗಡೆ: ಏನು, ಎತ್ತ

ಸೆಮಾಗ್ಲುಟೈಡ್‌ನಿಂದ ತಯಾರಾಗುವ ಜನಪ್ರಿಯ ತೂಕ ಇಳಿಕೆ ಔಷಧ ‘ವೆಗೋವಿ’ಯನ್ನು ಡ್ಯಾನಿಶ್ ಔಷಧ ಕಂಪನಿ ನೊವೊ ನಾರ್ಡಿಸ್ಕ್  ಭಾರತದಲ್ಲಿ ಬಿಡುಗಡೆ ಮಾಡಿದೆ. ಭಾರತದಲ್ಲಿ ದೀರ್ಘಕಾಲೀನ ತೂಕ ನಿರ್ವಹಣೆ ಮತ್ತು ಹೃದಯಾಘಾತದ ಅಪಾಯ ತಗ್ಗಿಸಲು ಅನುಮೋದನೆಗೊಂಡ ಮೊದಲ ಔಷಧ ಇದು ಎನ್ನಲಾಗಿದೆ. ವೆಗೋವಿ ವಾರಕ್ಕೊಮ್ಮೆ

ಹೃದಯಾಘಾತಕ್ಕೆ ಯುವಜನತೆ ಬಲಿ: ಕೋವಿಡ್‌ ಲಸಿಕೆ ಕಾರಣವಲ್ಲ ಎಂದ ವರದಿ

ಯುವಜನತೆ ಹೃದಯಾಘಾತದಿಂದ ಮೃತಪಡಲು ಕೋವಿಡ್ ಲಸಿಕೆಯೇ ಕಾರಣವಿರಬಹುದೇ ಎನ್ನುವ ಸಂಶಯದಿಂದ ರಾಜಾರಾಂ ತಲ್ಲೂರು ಎಂಬವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಈ ವಿಚಾರದಲ್ಲಿ ತನಿಖೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ಆಧರಿಸಿ ಸಿಎಂ ಸಿದ್ದರಾಮಯ್ಯ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ

ಚಿತ್ತಾಪುರದಲ್ಲಿ ಹೆರಿಗೆ ವೇಳೆ ತಾಯಿ ಮಗು ಸಾವು: ನರ್ಸ್‌ ಎಡವಟ್ಟು ಆರೋಪ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿವೃತ್ತ ನರ್ಸ್ ಎಡವಟ್ಟಿನಿಂದ ತಾಯಿ ಮಗು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಇಂಗಳಗಿ ಗ್ರಾಮದ ನಿವಾಸಿ ಶ್ರೀದೇವಿ ಪ್ರಭಾನೂರ್ (28) ಹಾಗೂ ನವಜಾತ ಶಿಶು ಮೃತಪಟ್ಟಿದೆ. ಮೃತ ಶ್ರೀದೇವಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ.

Heart Attack: ʻಕಾಂತಾರ ಚಾಪ್ಟರ್-1ʼ ತಂಡದ ಮೂರನೇ ಕಲಾವಿದನ ಸಾವು

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ʻಕಾಂತಾರ ಚಾಪ್ಟರ್-1ʼ ಚಿತ್ರದ ಸಹ ಕಲಾವಿದ ಬಿಜು ವಿಕೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತೀರ್ಥಹಳ್ಳಿ ಬ್ಯಾಕ್ ವಾಟರ್‌ನಲ್ಲಿ ದೈವದ ಉತ್ಸವ ಚಿತ್ರೀಕರಣಕ್ಕೂ ಮೊದಲೇ ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ಬಿಜು ವಿಕೆ ಅಸು ನೀಗಿದ್ದಾರೆ. ದೈವದ ಉತ್ಸವ

Covid: ಆಸ್ಪತ್ರೆಗಳಲ್ಲಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕದ ದೂರುಗಳ ಪರಿಶೀಲನೆ ನಡೆಸಿ ಸೂಕ್ತ ಕ್ರಮ

ಕೋವಿಡ್ ಬಗ್ಗೆ ಜನರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ಆದರೂ ಮುಂಜಾಗರೂಕತಾ ಕ್ರಮಗಳನ್ನು ಅನುಸರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಸಭೆಯಲ್ಲಿ ಮಾತನಾಡಿ,  ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ

ಜನಸಂದಣಿ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅನುಮತಿ ಕಡ್ಡಾಯ?

ಆರ್‌ಸಿಬಿ ವಿಜಯೋತ್ಸವ ದುರಂತದಲ್ಲಿ ಹನ್ನೊಂದು ಮಂದಿಯ ಸಾವಿನ ಬಳಿಕ ಎಚ್ಚೆತ್ತುಕೊಂಡಿರುವ ಸರ್ಕಾರ ಇನ್ನು ಮುಂದೆ ಜನಸಂದಣಿಯ ಕಾರ್ಯಕ್ರಮ ಗಳನ್ನು ಆಯೋಜಿಸುವಾಗ ಕೆಲವೊಂದು ನಿಯಮ ಕಡ್ಡಾಯಗೊಳಿಸಲು ಚಿಂತನೆ ನಡೆಸಿದೆ. ಮೊದಲಿಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್​​ಲೈನ್​ ಜಾರಿ ಗೊಳಿಸಲು ಸರ್ಕಾರ ಮುಂದಾಗಿದೆ. ಇನ್ಮುಂದೆ

Covid: ಆಮ್ಲಜನಕ,ವೆಂಟಿಲೇಟರ್‌, ಅಗತ್ಯ ಔಷಧಿ ಲಭ್ಯತೆ ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ಸೂಚನೆ

ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಮ್ಲಜನಕ, ಐಸೋಲೇಷನ್ ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಅಗತ್ಯ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.