Thursday, September 17, 2026
Menu

ಆಶಾ, ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ: ಆರ್‌. ಅಶೋಕ್‌

ashoka

ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡೋದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದ ಸಿದ್ದರಾಮಯ್ಯ ಅವರು ಇದೀಗ ಅವರನ್ನೆಲ್ಲ ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಟೀಕಿಸಿದ್ದಾರೆ.

ನಾನಾ ಬೇಡಿಕೆಗಳಿಗೆ ಒತ್ತಾಯಿಸಿ ಕಳೆದ ಮೂರು ದಿನಗಳಿಂದ ಕೊರೆಯುವ ಚಳಿಯಲ್ಲೂ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ ಕಾಂಗ್ರೆಸ್‌ ಸರ್ಕಾರ ಕೇಳಿದರೂ ಕೇಳಿಸದಂತೆ ಕಿವುಡಾಗಿದೆ. ಸರ್ಕಾರ ಎಲ್ಲರನ್ನೂ ವಂಚಿಸಿ ಬೀದಿಗೆ ತಂದು ನಿಲ್ಲಿಸಿ ಮಜಾ ನೋಡುತ್ತಿದೆ ಎಂದು ದೂರಿದ್ದಾರೆ.

Related Posts

Leave a Reply

Your email address will not be published. Required fields are marked *