ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಮತ್ತೋರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಇದರಿಂದ ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಿದ್ದೇಶ್ವರ್ ನಗರದ ನಿವಾಸಿ ಗೋವಿಂದ (37) ಮೃತ ವ್ಯಕ್ತಿ. ಆಟೋ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರೇ ಆಟೋ ಚಲಾಯಿಸಿಕೊಂಡು ಜಿಲ್ಲಾಸ್ಪತ್ರೆಗೆ ತೆರಳಿದ್ದಾರೆ. ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಹೃದಯಾಘಾತ ಇನ್ನಿಲ್ಲದಂತೆ ಕಾಡುತ್ತಿದೆ. ಚಿಕ್ಕವರಿಂದ ಹಿಡಿದು ದೊಡ್ಡವರವರೆಗೆ ಯಾರನ್ನೂ ಬಿಡುತ್ತಿಲ್ಲ. ಜಿಲ್ಲೆಯಲ್ಲಿ 1 ತಿಂಗಳ ಅಂತರದಲ್ಲಿ 16 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಈವರೆಗೆ ಹೃದಯಾಘಾತಕ್ಕೆ ಮೃತಪಟ್ಟವರು
ಮೇ 20 ರಂದು ಅರಕಲಗೂಡು ತಾಲೂಕಿನ ಅಭಿಷೇಕ್ ಬೆಂಗಳೂರಿನಲ್ಲಿ ಉಸಿರು ನಿಲ್ಲಿಸಿದ್ರೆ, ಅದೇ ದಿನ ಹೊಳೆನರಸೀಪುರದ 20 ವರ್ಷದ ವಿದ್ಯಾರ್ಥಿನಿ ಸಂದ್ಯಾ ಬಲಿ ಆಗಿದ್ದರು. ಮೇ 28 ರಂದು ಕವನ ಉಸಿರು ನಿಲ್ಲಿಸಿದ್ದರು.