Menu

ಬಾಗಲಕೋಟೆ ಪುನರ್ವಸತಿ ಕೇಂದ್ರ: ಚೀಲದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಬಾಗಲಕೋಟೆ ತಾಲೂಕಿನ ವೀರಾಪೂರ ಪುನರ್ವಸತಿ ಕೇಂದ್ರದಲ್ಲಿ ನವಜಾತ ಶಿಶುವನ್ನು ಚೀಲದಲ್ಲಿ ಹಾಕಿ ಬಿಟ್ಟು ಹೋಗಿರುವುದು ಪತ್ತೆಯಾಗಿದೆ. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಗು ಅಳುವ ಶಬ್ದ ಕೇಳಿ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಹೆರಿಗೆ ನಂತರ ಹೆಣ್ಣು ಮಗು ಎಂದು ಗೊತ್ತಾಗಿ ಇಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಮಗುವಿನ ಅಳು ಕೇಳಿ ಸ್ಥಳದಲ್ಲಿದ್ದ ಬಾಣಂತಿ ತಕ್ಷಣಕ್ಕೆ ಎದೆ ಹಾಲು ಉಣಿಸಿ ಪೋಷಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಮಕ್ಕಳ ರಕ್ಷಣಾ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು ಈ ಮಗುವನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಮಗುವನ್ನು ಯಾರು ಈ ರೀತಿಯಾಗಿ ಚೀಲದಲ್ಲಿಟ್ಟು ಹೋಗಿರುವುದು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

 

Related Posts

Leave a Reply

Your email address will not be published. Required fields are marked *