RSS ಪಥಸಂಚನಲಕ್ಕೆ ಅವಕಾಶ ನೀಡದಿರುವ @INCKarnataka ಸರ್ಕಾರದ ನಿರಂಕುಶವಾದಿ ನಡೆಗೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಈ ಮೂಲಕ ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ನೀಡಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದ್ದಾರೆ.
ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು!
RSS ಪಥಸಂಚನಲಕ್ಕೆ ಅವಕಾಶ ನೀಡದಿರುವ @INCKarnataka ಸರ್ಕಾರದ ನಿರಂಕುಶವಾದಿ ನಡೆಗೆ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ.
ಸಿಎಂ @siddaramaiah ಹಾಗು ಸಚಿವ @PriyankKharge ಅವರೇ, ನಿಮ್ಮ… pic.twitter.com/Aecr2DJWgn
— R. Ashoka (@RAshokaBJP) October 29, 2025
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ @siddaramaiah ಹಾಗೂ ಸಚಿವ @PriyankKharge ಅವರೇ, ನಿಮ್ಮ ಪರಮೋಚ್ಛ ನಾಯಕ @RahulGandhi ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರಿಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ ಸ್ವಾಮಿ. ಈ ರೀತಿ ಹಿಂಬಾಗಿಲಿನಿಂದ ಆರ್ ಎಸ್ಎಸ್ ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ RSS ನಿಷೇಧ ಮಾಡಿ ನೋಡೋಣ ಎಂದಿದ್ದಾರೆ.
ಮತ್ತೊಂದು ಪೋಸ್ಟ್ನಲ್ಲಿ ಅವರು, ಒಂದೇ ಒಂದು ರಸ್ತೆ ಗುಂಡಿ ಮುಚ್ಚಲು ದುಡ್ಡಿಲ್ಲ, ಪಾಲಿಕೆ ಶಾಲೆಗಳ ಶಿಕ್ಷಕರಿಗೆ 6 ತಿಂಗಳಿಂದ ವೇತನ ಕೊಟ್ಟಿಲ್ಲ, 8 ತಿಂಗಳಿಂದ ಸ್ಮಶಾನ ಸಿಬ್ಬಂದಿಗೆ ಸಂಬಳವಿಲ್ಲ ಎಂದು ಟೀಕಿಸಿದ್ದಾರೆ.
ಸ್ವಾಮಿ ಡಿಸಿಎಂ @DKShivakumar ಅವರೇ, ಬೆಂಗಳೂರಿನ ಜನ ಪಾಲಿಕೆಗೆ ಕಟ್ಟುತ್ತಿರುವ ಸಾವಿರಾರು ಕೋಟಿ ತೆರಿಗೆ ಹಣ ಎಲ್ಲಿ ಸ್ವಾಮಿ? ಜನರ ತೆರಿಗೆ ಹಣ ಯಾರ ಜೇಬು ಸೇರುತ್ತಿದೆ? ಇದರ ಮೇಲೆ ಈಗ ಎ-ಖಾತಾ ಪರಿವರ್ತನೆ ನೆಪದಲ್ಲಿ ಮತ್ತೊಮ್ಮೆ ಜನ ಸಾಮಾನ್ಯರಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲು ಇಳಿದಿದ್ದೀರಿ. ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ ಅಂತ ಬೆಂಗಳೂರನ್ನ ಬರ್ಬಾದ್ ಮಾಡಿಬಿಟ್ಟರಲ್ಲ ಸ್ವಾಮಿ. ಜನ ನಿಮ್ಮನ್ನ ಖಂಡಿತ ಕ್ಷಮಿಸುವುದಿಲ್ಲ ಎಂದು ಪೋಸ್ಟ್ ಮಾಡಿದ್ದಾರೆ. .


