Menu

ಬೆಂಗಳೂರು: ವಾಮಾಚಾರಕ್ಕೆ ಸಾಕುನಾಯಿ ಬಲಿಕೊಟ್ಟ ಮಹಿಳೆ

ಬೆಂಗಳೂರು: ಪಶ್ಚಿಮ ಬಂಗಾಳ ಮೂಲದ ಮಹಿಳೆಯೊಬ್ಬರು ವಾಸಿಸುತ್ತಿದ್ದ ಅಪಾರ್ಟ್ ಮೆಂಟ್ ನಲ್ಲಿ ವಾಮಾಚಾರಕ್ಕೆ ಸಾಕು ನಾಯಿಯನ್ನೇ ಕೊಂದು ಬಚ್ಚಿಟ್ಟಿದ್ದ ಅಮಾನವೀಯ ಘಟನೆ ಮಹದೇವಪುರದ ಚಿನ್ನಪ್ಪ ಲೇಔಟ್ ನಲ್ಲಿ ನಡೆದಿದೆ.

ವಾಮಾಚಾರಕ್ಕಾಗಿ ನಾಲ್ಕು ದಿನಗಳ ಹಿಂದೆಯೇ ಈ ಮಹಿಳೆ ತಾನೇ ಸಾಕಿದ ನಾಯಿಯನ್ನು ಹತ್ಯೆ ಮಾಡಿ ಬಚ್ಚಿಟ್ಟಿದ್ದಳು ಎನ್ನಲಾಗುತ್ತಿದೆ. ಮಹದೇವಪುರದ ಚಿನ್ನಪ್ಪ ಲೇಔಟ್ ಅಪಾರ್ಟ್‌ಮೆಂಟ್ ವಾಸವಾಗಿದ್ದ ಮಹಿಳೆ, ನಾಯಿಯ ಕತ್ತು ಕೊಯ್ದು ಹತ್ಯೆಗೈದಿದ್ದಾರೆ. ಹತ್ಯೆ ನಂತರ ನಾಯಿಯನ್ನು ಬಟ್ಟೆಯಲ್ಲಿ ಸುತ್ತಿಟ್ಟಿದ್ದು ಪ್ರಕರಣ ಬೆಳಕಿಗೆ ಬಂದಿದೆ.

ಈ ಮಹಿಳೆ 4 ಲ್ಯಾಬೋಡರ್‌ ನಾಯಿಗಳನ್ನ ಸಾಕಿದ್ದು, ಒಂದು ನಾಯಿಯನ್ನು ಕೊಂದಿದ್ದಾರೆ ಎನ್ನಲಾಗುತ್ತಿದೆ. ಮೃತ ನಾಯಿ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಕಳೇಬರ ಸಿಕ್ಕಿದೆ. ಇದನ್ನು ಮರಣೋತ್ತರ ಪರೀಕ್ಷೆಗೆಂದು ಕಳಿಸಿದ್ದಾರೆ. ನಾಲ್ಕು ದಿನಗಳ ಹಿಂದೆಯೇ ಹತ್ಯೆ ಮಾಡಿದ್ದು, ಬ್ಲ್ಯಾಕ್ ಮ್ಯಾಜಿಕ್‌ಗಾಗಿ ಈ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಮಹದೇವಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆಯನ್ನು ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *