Menu

Accident Death: ಸಾಗರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ಬೈಕ್‌ ಸವಾರ ಬಲಿ

ಶಿವಮೊಗ್ಗದ ಸಾಗರ ತಾಲೂಕಿನ ಅನಂದಪುರ ಸಮೀಪದ ಹೊಸಕೊಪ್ಪ ಬಳಿ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ.

ಗೌತಮಪುರ ನಿವಾಸಿ ಕೃಷ್ಣ (30) ಮೃತಪಟ್ಟವರು. ಕೃಷ್ಣ ಅವರು ಆನಂದಪುರದಲ್ಲಿ ಎಕ್ಸಲೆಂಟ್ ಸಲೂನ್ ಶಾಪ್ ನಡೆಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ. ಡಿಕ್ಕಿಯ ರಭಸಕ್ಕೆ ಅವರು ಸ್ಥಳದಲ್ಲೇ ಅಸು ನೀಗಿದ್ದಾರೆ.

ಆನಂದಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

 

Related Posts

Leave a Reply

Your email address will not be published. Required fields are marked *