Menu

ಕಂಬದಹಳ್ಳಿ ಆಂಜನೇಯಬೆಟ್ಟದಲ್ಲಿ ಬಾಂಬ್‌ ಸ್ಫೋಟಕ್ಕೆ ವಿದ್ಯಾರ್ಥಿಯ ಅಂಗೈ ಛಿದ್ರ

ನಾಗಮಂಗಲ ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ನಾಡಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ಗುರುತಿಸಲಾಗಿದೆ.

ಇವರು ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛತಾ ಕಾರ್ಯಕ್ಕಾಗಿ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಕಸದ ರಾಶಿಗೆ ಕೈ ಹಾಕಿದಾಗ ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಓರ್ವನ ಅಂಗೈ ಛಿದ್ರವಾಗಿದ್ದು, ಇನ್ನೋರ್ವನ ಮುಖದ ಭಾಗಕ್ಕೆ ಗಾಯವಾಗಿದೆ.

ಬೆಟ್ಟದಲ್ಲಿ ಕಾಡು ಪ್ರಾಣಿಗಳ ಬೇಟೆಯ ಉದ್ದೇಶಕ್ಕಾಗಿ ಬಾಡಬಾಂಬ್‌ ಬಳಕೆಯಾಗುತ್ತಿದೆಯೇ ಅತವಾ ಬೇರೆ ಯಾವುದಾದರೂ ಉದ್ದೇಶಕ್ಕೆ ಇರಿಸಲಾಗಿತ್ತೇ ಎಂಬುದು  ಇನ್ನೂ ಗೊತ್ತಾಗಿಲ್ಲ. ಸೂಕ್ತ ತನಿಖೆ  ನಡೆದರೆ  ಬೆಟ್ಟದಲ್ಲಿ ನಾಡ ಬಾಂಬ್‌ ಬಳಕೆಯ ಅಸಲಿಯತ್ತು ಹೊರಬರಬಹುದಷ್ಟೇ.

Related Posts

Leave a Reply

Your email address will not be published. Required fields are marked *