Menu

ಚನ್ನಗಿರಿಯಲ್ಲಿ ಕಳವು ಆರೋಪಿ ಬಾಲಕರ ಕಟ್ಟಿಹಾಕಿ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ

ಕಳ್ಳತನ ಮಾಡಿದ್ದಲ್ಲದೆ ಅಸಭ್ಯ ವರ್ತನೆ ತೋರಿದ್ದಾರೆಂದು ಆರೋಪಿಸಿ ಇಬ್ಬರು ಬಾಲಕರನ್ನು ಅಡಿಕೆ ಮರಕ್ಕೆ ಕಟ್ಟಿ ಹಲ್ಲೆ ಮಾಡಿ, ಗುಪ್ತಾಂಗಗಳಿಗೆ ಕೆಂಪು ಇರುವೆ ಬಿಟ್ಟು ಚಿತ್ರಹಿಂಸೆ ನೀಡಿರುವ ಅಮಾನವೀಯ ಘಟನೆ ದಾವಣಗೆರೆಯಲ್ಲಿ ನಡೆದಿರುವುದು ಬಹಿರಂಗಗೊಂಡಿದೆ.

ಚನ್ನಗಿರಿ ತಾಲೂಕಿನ ನಲ್ಲೂರ ಬಳಿ ಇರುವ ಅಸ್ತಾಪನಹಳ್ಳಿಯಲ್ಲಿ ಏಪ್ರಿಲ್​ 4ರಂದು ಘಟನೆ ನಡೆದಿದ್ದು, ಚಿತ್ರಹಿಂಸೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಸುದ್ದಿವಾಹಿನಿಯೊಂದು ಈ ವಿಷಯ ಪ್ರಸಾರ ಮಾಡುತ್ತಿದ್ದಂತೆ ಪೊಲೀಸರು 9 ಜನರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಸುಭಾಷ್​ ಎಂಬಾತನನ್ನು ವಶಕ್ಕೆ ಪಡೆದು ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.

ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಹಕ್ಕಿ- ಪಿಕ್ಕಿ ಜನಾಂಗದ ಬಾಲಕರ ಮೇಲೆ ಅದೇ ಜನಾಂಗದ ಹತ್ತು ಯುವಕರು ಹಲ್ಲೆ ನಡೆಸಿದ್ದಾರೆ.ಆರೋಪಿಗಳಾದ ಸುಭಾಷ್ , ಲಕ್ಕಿ), ದರ್ಶನ್ ಪರಶು , ಶಿವದರ್ಶನ್, ಹರೀಶ್ , ಪಟ್ಟಿ ರಾಜು, ಭೂಣಿ, ಸುಧನ್ ಅಲಿಯಾಸ್ ಮಧುಸೂಧನ್ ವಿರುದ್ದ ಪ್ರಕರಣ ದಾಖಲಾಗಿದೆ.

ಅಸ್ತಾಪನಹಳ್ಳಿ ಗ್ರಾಮದ ದರ್ಶನ ಎಂಬವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿ ಪರಾರಿಯಾಗಿದ್ದ ಬಾಲಕನನ್ನು ಹಿಡಿದು ಅಡಕೆ ತೋಟಕ್ಕೆ ಕರೆದೊಯ್ದು ಹಲ್ಲೆ‌ ಮಾಡ ಲಾಗಿದೆ. ಕಳ್ಳತನಕ್ಕೆ ಸಹಕರಿಸಿದ್ದ ಇನ್ನೊಬ್ಬ ಬಾಲಕನಿಗೂ ಥಳಿಸಲಾಗಿದೆ. ಹಲ್ಲೆಗೊಳಗಾದ ಬಾಲಕನ ತಾತ ಚನ್ನಗಿರಿ ಪೊಲೀಸರಿಗೆ ದೂರು ನೀಡಿದ್ದರು.

Related Posts

Leave a Reply

Your email address will not be published. Required fields are marked *