Menu

ಕಾರಿನೊಳಗೆ ಗುಂಡು ಹಾರಿಸಿಕೊಂಡು ಕಾರ್ಕಳದ ಉದ್ಯಮಿ ಆತ್ಮಹತ್ಯೆ

ಕಾರ್ಕಳದ ನಿಟ್ಟೆಯ ದೂಪದಕಟ್ಟೆ ರಾಜ್ಯ ಹೆದ್ದಾರಿ ಬಳಿ ಉದ್ಯಮಿ ಕಾರಿನೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಿಲೀಪ್ ಎನ್.ಆರ್ ಆತ್ಮಹತ್ಯೆ ಮಾಡಿಕೊಂಡ ಉದ್ಯಮಿ ವ್ಯಕ್ತಿ.

ದಿಲೀಪ್‌ ಮಂಗಳೂರಿನಲ್ಲಿ ಸಣ್ಣ ಉದ್ಯಮ ನಡೆಸುತ್ತಿದ್ದರು. ಉದ್ಯಮ ನಷ್ಟ ಹಾಗೂ ವಿಪರೀತ ಸಾಲ ಆತ್ಮಹತ್ಯೆಗೆ ಕಾರಣ ಆಗಿರಬಹುದು ಎಂದು ಶಂಕಿಸಲಾಗಿದೆ. ಕುಟುಂಬದ ಜೊತೆ ಅವರು ಮಂಗಳೂರಿನಲ್ಲಿ ವಾಸವಾಗಿದ್ದರು. ಬೆಳಗಿನ ಜಾವ ಈ ಘಟನೆ ನಡೆದಿದೆ.

ಕಾರಿನಲ್ಲಿ ಸ್ವೀಟ್ ಬಾಕ್ಸ್ , ರಿವಾಲ್ವರ್ ಪತ್ತೆಯಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿದೆ.

Related Posts

Leave a Reply

Your email address will not be published. Required fields are marked *