ಚಿಕ್ಕಬಳ್ಳಾಪುರದ ನಂದಿನಿ ಬೆಟ್ಟದಲ್ಲಿ ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಲಾಗಿದೆ.
ನಾಳೆ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ರದ್ದುಗೊಳಿಸಲಾಗಿದ್ದು, ಬೆಂಗಳೂರಿನಲ್ಲಿ ಎಂದಿನಂತೆ ನಡೆಸಲು ತೀರ್ಮಾನಿಸಲಾಗಿದೆ.
ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ 12 ಗಂಠೆಗೆ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.