ಡಿವೈಡರ್ಗೆ ಇನ್ನೋವಾ ಕಾರು ಡಿಕ್ಕಿಯಾಗಿ ತಮಿಳುನಾಡು ಮೂಲದ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಕಾತ್ರಾಳ ಗ್ರಾಮದ ಕೆರೆ ಬಳಿ ನಡೆದಿದೆ.
ಕಾರಿನಲ್ಲಿದ್ದ ಅರ್ಜುನ್(28), ಶರವಣ(31) ಮತ್ತು ಸೇಂದಿಲ್(29) ಮೃತಪಟ್ಟವರು. ಅಪಘಾತ ನಡೆದ ಸ್ಥಳದಲ್ಲೇ ಒಬ್ಬ ಅಸು ನೀಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.