ಚಿತ್ರದುರ್ಗ
ನಟ ಡಾಲಿಗಾಗಿ ಮುಗಿ ಬಿದ್ದ ಅಭಿಮಾನಿಗಳಿಗೆ ಲಾಠಿ ರುಚಿ
ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ನಡೆಯುತ್ತಿರುವ ತರಳಬಾಳು ಹುಣ್ಣಿಮೆ ಮಹೋತ್ಸವದಲ್ಲಿ ಭಾಗವಹಿಸಲು ನಟ ಡಾಲಿ ಧನಂಜಯ ಆಗಮಿಸಿದ್ದರು. ಈ ವೇಳೆ ಧನಂಜಯ ಅವರನ್ನು ನೋಡಲು ಅಭಿಮಾನಿಗಳು ಜಮಾಯಿಸಿದ್ದಾರೆ. ಡಾಲಿ ಜೊತೆ ಸೆಲ್ಫಿ ಬೇಕು ಎಂದು ಫ್ಯಾನ್ಸ್ ಮುಗಿ ಬಿದ್ದಿದ್ದಾರೆ, ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಲಾಠಿ ಬೀಸಿ ಜನ ದಟ್ಟಣೆ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ಭರಮಸಾಗರದಲ್ಲಿ ಫೆ. 4ರಿಂದ ಆರಂಭಗೊಂಡಿದ್ದು, 12ರವರೆಗೆ ತರಳಬಾಳು ಹುಣ್ಣಿಮೆ ಮಹೋತ್ಸವ ನಡೆಯಲಿದೆ. ಪ್ರತಿ ವರ್ಷದಂತೆ ಈ ವರ್ಷವೂ
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ : ಎಚ್.ಎಂ.ರೇವಣ್ಣ
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಗ್ಯಾರಂಜಿ ಅನುಷ್ಠಾನ ಚುನಾವಣೆ ಗಿಮಿಕ್ ಅಲ್ಲ. ಜನರ ಅಭಿವೃದ್ಧಿ ದೂರದೃಷ್ಟಿಯನ್ನು ಗಮನದಲ್ಲಿರಿಸಿ ಜಾರಿ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಜಿಲ್ಲಾ ಸಮಿತಿಯ ನೂತನ
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದ ಕೇಂದ್ರ: ಡಿಕೆಶಿ ವಾಗ್ದಾಳಿ
ಭದ್ರಾ ಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ ನೀಡುವುದಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿತ್ತು. ಬಸವರಾಜ ಬೊಮ್ಮಾಯಿ ಅವರು ಕೂಡ ರಾಜ್ಯ ಬಜೆಟ್ ನಲ್ಲಿ ಈ ವಿಚಾರ ಸೇರಿಸಿದ್ದರು. ಆದರೆ ಇದುವರೆಗೂ
ಟ್ಯೂಷನ್ ತಪ್ಪಿಸಲು ಕಿಡ್ನ್ಯಾಪ್ ಕಥೆ ಕಟ್ಟಿದ ಮಕ್ಕಳು
ಚಿತ್ರದುರ್ಗದ ಐಮಂಗಲ ಅಬ್ಬಿನ ಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟ್ಯೂಷನ್ಗೆ ಹೋಗುವುದನ್ನು ತಪ್ಪಿಸಿಕೊಳ್ಳಲು ಕಿಡ್ನ್ಯಾಪ್ ಕಥೆ ಕಟ್ಟಿ ಪೋಷಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿರುವ ಕಟ್ಟು ಕಥೆಯನ್ನು ಪೊಲೀಸರು ಬಯಲುಗೊಳಿಸಿದ್ದಾರೆ. ಟ್ಯೂಷನ್ಗೆ ಹೋದ ಮಕ್ಕಳು ತಡವಾಗಿ ಮನೆಗೆ ಬಂದವರು ತಾವು ಕಿಡ್ನ್ಯಾಪ್