ನವದೆಹಲಿ: ಕರ್ನಾಟಕದ ಪ್ರವೀಣ್ ಸೂದ್ ಅವರನ್ನು ಸಿಬಿಐ ನಿರ್ದೇಶಕರಾಗಿ ಮುಂದುವರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಪ್ರವೀಣ್ ಸೂದ್ ಅವರ ಸಿಬಿಐ ನಿರ್ದೇಶಕರಾಗಿ ಅಧಿಕಾರಾವಧಿಯನ್ನು 1 ವರ್ಷ ಮುಂದುವರಿಸಿ ಕೇಂದ್ರ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.
1986 ಐಪಿಎಸ್ ಬ್ಯಾಚ್ ನ ಕರ್ನಾಟಕ ಕ್ರೆಡ್ ಆಗಿರುವ ಪ್ರವೀಣ್ ಸೂದ್ ಅಧಿಕಾರವಧಿ ಮೇ 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಸಂಪುಟ ನೇಮಕಾತಿ ಸಮಿತಿ 1 ವರ್ಷ ವಿಸ್ತರಣೆ ಮಾಡಲು ತೀರ್ಮಾನಿಸಿತು.
ರಾಹುಲ್ ವಿರೋಧ
ಪ್ರವೀಣ್ ಸೂದ್ ಅವರ ಅಧಿಕಾರಾವಧಿ ಮುಂದುವರಿಕೆಗೆ ಕೇಂದ್ರ ಸರ್ಕಾರ ಒಲವು ವ್ಯಕ್ತಪಡಿಸಿದ್ದಕ್ಕೆ ಲೋಕಸಭಾ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಪ್ರಧಾನಮಂತ್ರಿ ಕಚೇರಿಯಲ್ಲಿ ಕಳೆದ ಮೇ.5 ರಂದು ನಡೆದ ಸಭೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಸುಪ್ರೀಂ ಕೋರ್ಟ್ನ ಸಿಜೆಐ ಸಂಜೀವ್ ಖನ್ನಾ ಭಾಗವಹಿಸಿದ್ದರು.