Menu

ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ ಪೀಠವು ರಾಜ್ಯ ಸರ್ಕಾರಕ್ಕೆ ಹಾಗೂ ವಿಚಾರಣಾಧೀನ ನ್ಯಾಯಾಲಯಕ್ಕೆ ವಾರದೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಜೈಲಿನಲ್ಲಿ ಮೂಲಸೌಕರ್ಯ ಒದಗಿಸಲಾಗಿದೆಯೇ ಎಂದು ರಾಜ್ಯ ಸರ್ಕಾರಕ್ಕೆ ಹಾಗೂ ಸಾಕ್ಷಿಗಳ ವಿಚಾರಣೆ ಪ್ರಗತಿ

ನಟ ಡಾ. ರಾಜ್ ಕುಮಾರ್ ಸಮಾಧಿಗೆ ಜಮೀನು: ಹೇಳಿಕೆ ಸುಳ್ಳಾಗಲ್ಲವೆಂದ ನಟ ಚೇತನ್‌

ನಟ ಡಾ. ರಾಜ್ ಕುಮಾರ್ ಸಮಾಧಿ ಸ್ಮಾರಕಕ್ಕಾಗಿ ರಾಜ್ಯ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿರುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ನಟ ಚೇತನ್ ಅಹಿಂಸಾ, ಆ ಹೇಳಿಕೆಗೆ ಈಗಲೂ ಬದ್ಧ, ನಾನು ಕ್ಷಮೆ ಕೇಳಿದರೂ ಹೇಳಿಕೆ ಸುಳ್ಳಾಗಲ್ಲ ಎಂದಿದ್ದಾರೆ. ರಾಜ್ ಕುಮಾರ್

ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿದ್ದ ನಟ ಚೇತನ್‌ ವಿರುದ್ಧ ದೂರು

ನಟ ಡಾಕ್ಟರ್ ರಾಜ್‌ಕುಮಾರ್ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯಾ ಎಂದು ಪ್ರಶ್ನಿಸಿರುವ ನಟ ಚೇತನ್ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಡಾಕ್ಟರ್ ರಾಜ್‌ಕುಮಾರ್ ಸೇನೆ ದೂರು ದಾಖಲಿಸಿದೆ. ಡಾಕ್ಟರ್ ರಾಜ್‌ಕುಮಾರ್ ಹುಟ್ಟಿದ ದಿನದಂದು ಅವರ ಸಮಾಧಿಗೆ 2.5

ಬೋನಿ ಕಪೂರ್‌ ನನ್ನ ಕೊಲೆ ಮಾಡಿದ್ದು ಅಂತ ಹೇಳಿತಾ ಶ್ರೀ ದೇವಿ ಆತ್ಮ?

ಸೂಪರ್ ಸ್ಟಾರ್‌ ಶ್ರೀದೇವಿ 2018 ರಲ್ಲಿ ನಿಗೂಢವಾಗಿ ಮೃತಪಟ್ಟಿದ್ದು, ಅವರ ಸಾವು ಅಪಘಾತವಲ್ಲ, ಕೊಲೆ. ಕೊಲೆ ಮಾಡಿದ ವ್ಯಕ್ತಿ ಬೋನಿ ಕಪೂರ್ ಎಂದು  ಆಕೆಯ ಆತ್ಮವೇ ಹೇಳಿದೆ ಎಂಬ ಮಾಹಿತಿಯನ್ನು ಅತೀಂದ್ರಿಯ ಸಂಶೋಧಕ ಸೌರಭ್ ಪೂನಿಯಾ ಬಹಿರಂಗ ಮಾಡಿದ್ದಾರೆ. ಪ್ಯಾರಾನಾರ್ಮಲ್ ತನಿಖೆ

‘ಸರಿಗಮಪ ಲಿಟಲ್ ಚಾಂಪ್ಸ್; ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಅಸಾಧಾರಣ ಪ್ರತಿಭೆಗಳನ್ನು ಗುರುತಿಸಿ ಬೆಳೆಸುವಲ್ಲಿ ಹೆಸರುವಾಸಿಯಾದ  ಜೀ ಕನ್ನಡ ವಾಹಿನಿಯ ಜನಪ್ರಿಯ ಗಾಯನ ರಿಯಾಲಿಟಿ ಶೋ ‘ಸರಿಗಮಪ ಲಿಟಲ್ ಚಾಂಪ್ಸ್’ ಮತ್ತೊಮ್ಮೆ ಪ್ರೇಕ್ಷಕರನ್ನು ರಂಜಿಸಲು ಸಿದ್ಧವಾಗಿದೆ.  ಮೂರರಿಂದ 15 ವರ್ಷದೊಳಗಿನ ಪುಟಾಣಿ ಪ್ರತಿಭೆಗಳು ಭಾಗವಹಿಸುವ ಈ ಸೀಸನ್, ಕರ್ನಾಟಕದ ಮೂಲೆ ಮೂಲೆಯ

ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ

ಮುಂಬೈನಲ್ಲಿ ಭಾನುವಾರ ನಿಧನರಾದ ಪ್ರಸಿದ್ಧ ಗಾಯಕಿ ಆಶಾ ಭೋಸ್ಲೆ ಅವರ ಅಂತ್ಯಕ್ರಿಯೆ ಸೋಮವಾರ (ಇಂದು) ಸಂಜೆ 4 ಗಂಟೆಗೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ  ನಡೆಯಲಿದೆ. ಇಂದು ಬೆಳಿಗ್ಗೆ 11 ಗಂಟೆಯಿಂದ ಮೂರರವರೆಗೆ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 92

ಬೆಸುಗೆಯ ಹೊಸ ಆರಂಭ ‘ಜೋಡಿ ನಂ.1’ ಇದೇ ಏಪ್ರಿಲ್ 4 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಜೀ ಕನ್ನಡ  ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ ಹಿರಿತೆರೆ ಮತ್ತು ಕಿರುತೆರೆ ಜೋಡಿಗಳು ತೆರೆಯ ಹಿಂದೆ ಹೇಗೆ ಇರ್ತಾರೆ, ಒಬ್ಬರನ್ನೊಬ್ಬರು

“ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ” ಬ್ಯಾನ್‌: ಜೋಗಿ ಪ್ರೇಮ್‌ಗೆ ಚುರುಕು ಮುಟ್ಟಿಸಿದ ಕೇಂದ್ರ

ಜೋಗಿ ಪ್ರೇಮ್‌ ನಿರ್ದೇಶನ ಹಾಗೂ ಧ್ರುವ ಸರ್ಜಾ ಅಭಿನಯದ ‘ಕೆಡಿ’ ಸಿನಿಮಾದ ‘ಸರ್ಸೆ ಸರ್ಸೆ ನಿನ್ನ ಸೆರಗಾ ಸರ್ಸೆ’ ಹಾಡಿಗೆ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದ್ದು, ಹಾಡನ್ನು ಕೇಂದ್ರ ಸರ್ಕಾರ ಬ್ಯಾನ್‌ ಮಾಡಿದೆ. ಈ ಹಾಡಿನ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.

ಮಾರ್ಚ್ 9 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ ಬರ್ತಿದ್ದಾರೆ ‘ಕೃಷ್ಣ ರುಕ್ಕು’

ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ಼ ಕನ್ನಡ 2026 ಶುರುವಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಸಜ್ಜಾಗಿದೆ. ಪ್ರೀತಿ, ಪ್ರತೀಕಾರ ಮತ್ತು ವಿಧಿಯಾಟದ ಸುತ್ತ ನಡೆಯುವ ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ ಇದೇ ಮಾರ್ಚ್ 9 ರಿಂದ 6:30

ಪವಿತ್ರಾಗೌಡ ಮನೆಯೂಟಕ್ಕೆ ಹೈಕೋರ್ಟ್‌ ಕೊಕ್‌

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟಿ ಪವಿತ್ರಾ ಗೌಡ ಅವರಿಗೆ ಕೆಳಹಂತದ ನ್ಯಾಯಾಲಯ ನೀಡಿದ್ದ ‘ಮನೆಯೂಟ’ ಸೌಲಭ್ಯ ರದ್ದುಪಡಿಸಿ, ಜೈಲಿನಲ್ಲೇ ಸಿದ್ಧವಾಗುವ ಆಹಾರವನ್ನೇ ಸೇವಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ. 2024ರ ಜೂನ್‌ ಎಂಟರಂದು ಬೆಂಗಳೂರಿನಲ್ಲಿ ದರ್ಶನ್‌ ಮತ್ತು