ಉತ್ತರಾಖಂಡದಲ್ಲಿ ಮೇಘಸ್ಫೋಟಗೊಂಡು ಹಠಾತ್ ಪ್ರವಾಹ ಉದ್ಭವಿಸಿ ತೀವ್ರ ಸಮಸ್ಯೆಯುಂಟಾಗಿದೆ. ಉತ್ತರಕಾಶಿ ಬಳಿ ನಿರ್ಮಾಣ ಹಂತದ ಹೋಟೆಲ್ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.
ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘ ಸ್ಫೋಟಗೊಂಡು ಕಾರ್ಮಿಕರು ಪ್ರಹಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಭದ್ರಿನಾಥ ಯಾತ್ರೆ ಸ್ಥಗಿತಗೊಂಡಿದೆ. ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ರುದ್ರಪ್ರಯಾಗ ಜಿಲ್ಲೆಯ ಸೋನ್ಪ್ರಯಾಗ್-ಮುಂಕಟಿಯಾ ರಸ್ತೆ ಬಂದ್ ಆಗಿದೆ. ಕೇದಾರನಾಥಕ್ಕೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಮಾರ್ಗ ಬಂದ್ ಮಾಡಲಾಗಿದೆ. ಉತ್ತರಾಖಂಡದ ಬಾಗೇಶ್ವರದಲ್ಲಿ ಸರಯೂ ನದಿ ಭೋರ್ಗರೆಯುತ್ತಾ ಹರಿಯುತ್ತಿದ್ದು, ಹಲವು ಕಟ್ಟಡಗಳು ಮುಳುಗಿವೆ. ಕೇದಾರನಾಥ್ನಲ್ಲಿ ಭೂಕುಸಿತಗೊಂಡಿದೆ.