Menu

ಚಾಂಪಿಯನ್ಸ್‌ ಟ್ರೋಫಿಯಲ್ಲಿ ಚಾಂಪಿಯನ್‌ ಆದ ಭಾರತ ತಂಡಕ್ಕೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

cm siddaramaiah

ಅಮೋಘ‌ ಆಟದ ಮೂಲಕ ಭಾರತ ತಂಡ ಚಾಂಪಿಯನ್ ಟ್ರೋಫಿಯ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇಡೀ ಪಂದ್ಯಾವಳಿಯಲ್ಲಿ ಸೋಲಿಲ್ಲದ ಸರದಾರರಾದ ಭಾರತೀಯ ತಂಡಕ್ಕೆ ಅಭಿನಂದನೆಗಳು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಸಾಮಾಜಿಕ ಖಾತೆ ಎಕ್ಸ್‌ನಲ್ಲಿ  ಪೋಸ್ಟ್‌ ಮಾಡಿದ್ದಾರೆ.

ಬೌಲಿಂಗ್, ಬ್ಯಾಟಿಂಗ್, ಕ್ಷೇತ್ರರಕ್ಷಣೆ ಹೀಗೆ ಎಲ್ಲಾ ವಿಭಾಗಗಳಲ್ಲೂ ನಮ್ಮವರ ಆಟ ಹುಬ್ಬೇರಿಸುವಂತಿತ್ತು. ಪ್ರತಿ ಪಂದ್ಯದಲ್ಲೂ ರನ್ ಗಳಿಸುತ್ತಾ, ನಿರಂತರವಾಗಿ ತಂಡವನ್ನು ಗೆಲುವಿನ ದಡ ಸೇರಿಸುತ್ತಿರುವ ನಾಡಿನ ಮನೆಮಗ ಕೆ.ಎಲ್. ರಾಹುಲ್ ಆಟ ಹೆಚ್ಚು ಖುಷಿಕೊಟ್ಟಿದೆ ಎಂದು ಹೇಳಿದ್ದಾರೆ.

ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್ಸ್ ಆಗಿ ಹೊರಹೊಮ್ಮುವ ಮೂಲಕ ಇತಿಹಾಸ ಬರೆದಿದೆ.  ದುಬೈನಲ್ಲಿ ಭಾನುವಾರ ನಡೆದ ಫೈನಲ್ ನಲ್ಲಿ ಭಾರತ ತಂಡ 4 ವಿಕೆಟ್ ಗಳಿಂದ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಅಜೇಯರಾಗಿ ಚಾಂಪಿಯನ್ಸ್ ಟ್ರೋಫಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಮೂಲಕ ಭಾರತ 12 ವರ್ಷಗಳ ನಂತರ ಮೊದಲ ಬಾರಿ ಹಾಗೂ ಮೂರನೇ ಬಾರಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ.

Related Posts

Leave a Reply

Your email address will not be published. Required fields are marked *