ನವದೆಹಲಿ: ರಾಷ್ಟ್ರಪತಿ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಆಕಸ್ಮಿಕವಾಗಿ ಬಾಲಿವುಡ್ ನಟ ಆಮೀರ್ ಖಾನ್ ಮುಖಾಮುಖಿ ಭೇಟಿ ಆಗಿದ್ದಾರೆ.
ರಾಜ್ಯದ 7 ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಮಂಗಳವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ರಾಷ್ಟ್ರಪತಿ ಭವನಕ್ಕೆ ತೆರಳಿದಾಗ ಅಮೀರ್ ಖಾನ್ ಮುಖಾಮುಖಿ ಆದರು. ಈ ವೇಳೆ ಪರಸ್ಪರ ಕುಶಲೋಪರಿ ವಿಚಾರಿಸಿದ ಸಿದ್ದರಾಮಯ್ಯ ಅಮಿರ್ ಖಾನ್ ಅವರ ಸಿತಾರೆ ಜಮೀನ್ ಚಿತ್ರ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.
ಸಿಎಂ ಸಿದ್ದರಾಮಯ್ಯ ಸಚಿವರಾದ ಮಹದೇವಪ್ಪ, ಕೆ.ಜೆ ಚಾರ್ಜ್, ಸತೀಶ್ ಜಾರಕಿಹೊಳಿ ಸಮ್ಮುಖದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ರಾಜ್ಯಪಾಲರಿಂದ ಬಂದಿರುವ ರಾಜ್ಯದ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.