Menu

ಸಿಎಂ ಬಳಿ ಹಣವಿಲ್ಲ-ತಮಾಷೆಗಾದ್ರೂ ಪರಮೇಶ್ವರ ಸತ್ಯ ಹೇಳಿದ್ದಾರೆ: ಬಸವರಾಜ ಬೊಮ್ಮಾಯಿ

basavaraj bommai

ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರ ದಲ್ಲಿ ಮುಳುಗಿ ದಿಕ್ಕು ದೆಸೆ ಇಲ್ಲದ ಸರ್ಕಾರ ರಾಜ್ಯದಲ್ಲಿ ನಡೆದಿದೆ‌. ಇದರಿಂದ ಜನ ಬೇಸತ್ತಿದ್ದಾರೆ‌. ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಹಣ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಮಾಷೆಗಾಗಿಯಾದರೂ ಸತ್ಯ ಹೇಳಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೃಹ ಸಚಿವ ಪರಮೇಶ್ವರ ಅವರು ಸಿಎಂ ಸಿದ್ದರಾಮಯ್ಯ ಅವರ ಬಳಿ ದುಡ್ಡು ಇಲ್ಲಾ ಎಂದು ಬಹಿರಂಗ ಸಭೆಯಲ್ಲಿ ಹೇಳಿದ್ದರು. ಈಗ ತಮಾಷೆಗಾಗಿ ಹೇಳಿದ್ದೆ ಎಂದು ಹೇಳುತ್ತಿದ್ದಾರೆ. ತಮಾಷೆಗಾದರೂ ಸತ್ಯ ಹೇಳಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ರಾಜ್ಯ ಸರ್ಕಾರದ ವಿರುದ್ದ ಆಡಳಿತ ಪಕ್ಷದ ಶಾಸಕರೇ ಆರೋಪ ಮಾಡುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಶಾಸಕರಿಗೆ ಯಾವುದೇ ಅನುದಾನ ಇಲ್ಲ. ಕೆಲಸ ಮಾಡಲು ಆಗಿಲ್ಲ. ಹೀಗೆ ಆದರೆ, ಇನ್ನೆರಡುವರೆ ವರ್ಷದಲ್ಲಿ ಜನರ ಬಳಿ ಹೋಗಲು ಆಗುವುದಿಲ್ಲ. ಸರ್ಕಾರದ ಬಳಿ ಹಣ ಇಲ್ಲ. ಕೆಲಸ ಮಾಡಲು ಪ್ರತಿಯೊಂದಕ್ಕೂ ಭ್ರಷ್ಟಾಚಾರ, ಎಷ್ಟಿಮೇಟ್ ಗೂ ಭ್ರಷ್ಟಾಚಾರ, ವರ್ಕ್ ಆರ್ಡರ್ ತೆಗೆದುಕೊಳ್ಳಲು ಭ್ರಷ್ಟಾಚಾರ. ಕಾಂಗ್ರೆಸ್ ನ ನೀತಿಯಿಂದಾಗಿ ಜನರು ತಮ್ಮ ದುಡಿಮೆಯ ಹಣವನ್ನು ಭ್ರಷ್ಟಾಚಾರಕ್ಕೆ ಕೊಡುವ ಪರಿಸ್ಥಿತಿ ಬಂದಿದೆ. ಸ್ಮಾರ್ಟ್ ಮೀಟರ್ ದರ 500-600 ಇದ್ದದ್ದು ಆರೇಳು ಸಾವಿರ ಮಾಡಿದ್ದಾರೆ. ಅದನ್ನು ಸರ್ಕಾರ ಕೊಡುವುದಿಲ್ಲ ಜನರಿಂದ ಕೊಡಿಸುತ್ತಾರೆ‌. ಜನ ಕೊಡುವ ದುಡ್ಡಿನಿಂದ ಭ್ರಷ್ಟಾಚಾರ ಮಾಡುತ್ತಿದ್ದಾರೆ. ರೈತರ ಹಾಲಿನ ಪ್ರೋತ್ಸಾಹ ಧನ 750 ಕೋಟಿ ರೂ. ಕೊಟ್ಟಿಲ್ಲ. ಹಾಲು ಉತ್ಪಾದಕ ಮಂಡಳಿಗಳಿಗೆ ಹಾಲಿನ ದರ ಏರಿಸಲು ಹೇಳಿದರು. ಅದನ್ನು ಜನರ ಮೇಲೆ ಹಾಕಿದರು. ಅಬಕಾರಿ ಇಲಾಖೆಯಲ್ಲಿ ಬಡವರು ಕುಡಿಯುವ ಸಾರಾಯಿ ಮೇಲೆ ಹೆಚ್ಚಿನ ತೆರಿಗೆ ಹಾಕಿದ್ದಾರೆ. ಅಬಕಾರಿ ಡೀಲರ್ಸ್ ಪ್ರತಿಭಟನೆ ಮಾಡಿದರು. ಪಿಡಬ್ಲ್ಯುಡಿ ಗುತ್ತಿಗೆದಾರರು, ವಿದ್ಯುತ್ ಗುತ್ತಿಗೆದಾರರು ಪ್ರತಿಭಟನೆ ಮಾಡಿದರು. ಆದರೂ ಸರ್ಕಾರದವರು ತುಟಿ ಪಿಟಕ್ ಅನ್ನಲಿಲ್ಲ. ವಿರೋಧ ಪಕ್ಷದಲ್ಲಿ ಇದ್ದಾಗ ಭ್ರಷ್ಟಾಚಾರದ ವಿರುದ್ದ ದೊಡ್ಡ ಹಂಗಾಮ ಮಾಡಿದ್ದರು. ಇಡೀ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ದಿಕ್ಕು ದೆಸೆ ಇಲ್ಲದೆ ನಡೆದಿದೆ‌ ಇದರಿಂದ ಜನ ಬೇಸತ್ತಿದ್ದಾರೆ‌ ಎಂದು ಆರೋಪಿಸಿದರು.

ಕಾನೂನು ಸಚಿವ ಎಚ್ ಕೆ ಪಾಟೀಲರು ಅಕ್ರಮ ಗಣಿ ತನಿಖೆ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ. ಅವರು ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸಚಿವರಾಗಿದ್ದಾರೆ, ಅದನ್ನು ಅವರಿಗೆ ನೇರವಾಗಿಯೇ ಹೇಳಬಹುದಿತ್ತು. ಅವರ ಮಾತು ಸಿಎಂ ಕೇಳುತ್ತಿರಲಿಲ್ಲವೆ. ಪ್ರತಿಪಕ್ಷದವರ ರೀತಿ ಬಹಿರಂಗವಾಗಿ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ಗಣಿ ಹರಾಜು ಹಾಕಲು ಕಾನೂನು ಮಾಡಿತ್ತು ಅದಕ್ಕೂ ಮೊದಲಿನ ದಿನ ರಾಜ್ಯ ಸರ್ಕಾರ ಗಣಿ ಹರಾಜು ಹಾಕಿದ್ದರು. ಈ ಹಿಂದೆ ನಮ್ಮ ಅಧಿಕಾರದಲ್ಲಿ ಜಿಂದಾಲ್ ಗೆ ಜಮೀನು ನೀಡಬಾರದು ಎಂದು ಎಚ್. ಕೆ. ಪಾಟೀಲರು ಪತ್ರ ಬರೆದಿದ್ದರು. ಅವರು ಅಧಿಕಾರಕ್ಕೆ ಬಂದ ಮೇಲೆ ಜಿಂದಾಲ್ ಗೆ ಜಮೀನು ನೀಡಿದರು. ಈ ರೀತಿಯ ಡಬಲ್ ಸ್ಟ್ಯಾಂಡರ್ಡ್ ಯಾಕೆ ಎಂದು ಪ್ರಶ್ನಿಸಿದರು.

ನಮ್ಮ ಸರ್ಕಾರದ ಅವಧಿಯಲ್ಲಿ ನಮ್ಮ ವಿರುದ್ದ ಮಾಡಿದ್ದ ಭ್ರಷ್ಟಾಚಾರದ ಆರೋಪ ರಾಜಕೀಯ ಪ್ರೇರಿತ ಆಗಿತ್ತು. ನಾನು ಆಗಲೇ ದಾಖಲೆ ಕೊಡುವಂತೆ ಹೇಳಿದ್ದೆ. ಯಾರೂ ದಾಖಲೆ ನೀಡಲಿಲ್ಲ. ಈಗ ಅದೇ ಗುತ್ತಿಗೆದಾರ ಸಂಘ ಈ ಸರ್ಕಾರದ ವಿರುದ್ದ ಆರೋಪ ಮಾಡಿದ್ದಾರೆ‌. ಶಾಸಕ ಬಿ.ಆರ್ ಪಾಟಿಲರು ಸರ್ಕಾರದ ವಿರುದ್ದ ಆರೋಪ ಮಾಡುತ್ತಿರುವುದು ಇದೇನು ಮೊದಲ ಸಲ ಅಲ್ಲ. ಈ ಹಿಂದೆ ಮೂರು ಬಾರಿ ಆರೋಪ ಮಾಡಿದ್ದರು. ಆಗ ಅವರನ್ನು ಸಮಾಧಾನ ಮಾಡಲು ಯೋಜನಾ ಆಯೊಗದ ಉಪಾಧ್ಯಕ್ಷನ್ನಾಗಿ ಮಾಡಿದ್ಸರು. ಈಗ ಸಮಾಧಾನ ಮಾಡಲು ಸಂಪುಟ ಸ್ಥಾನ ಕೊಡಬಹುದು ಎಂದರು.

ರಾಜ್ಯ ಸರ್ಕಾರದ ವಿರುದ್ದ ಹೋರಾಟ ಮಾಡಲು ನಾವೆಲ್ಲ ಸಭೆ ಸೇರಿ ಚರ್ಚೆ ಮಾಡಿ ಆಯಾ ಪ್ರದೇಶದ ಸಮಸ್ಯೆಗಳನ್ನು ತೆಗೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಸಕ್ರಿಯರಾಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪ ಅವರು ನಮ್ಮ ಪಕ್ಷದ ಹಿರಿಯ ನಾಯಕರು ಅವರು ಹೋರಾಟಕ್ಕೆ ಬಂದಾಗ ಸ್ಪೂರ್ತಿ ಬರುತ್ತದೆ. ಅವರು ದೊಡ್ಡ ನಾಯಕರು. ಅವರು ಪ್ರವಾಸ ಮಾಡಿದಾಗಲೆಲ್ಲಾ ಪಕ್ಷ ಅಧಿಕಾರಕ್ಕೆ ಬಂದಿದೆ. ಅವರು ಈಗ ಸ್ವಯಂಪ್ರೇರಿತರಾಗಿ ಪಕ್ಷದ ಸಂಘಟನೆಗೆ ಬಂದಿದ್ದಾರೆ. ಅವರಿಂದ ಪಕ್ಷಕ್ಕೆ ಶಕ್ತಿ ಹೆಚ್ಚಾಗುತ್ತದೆ ಎಂದ

ತುರ್ತು ಪರಿಸ್ಥಿತಿಯ ವಿರುದ್ದ 50 ವರ್ಷಾಚರಣೆ ಮಾಡುತ್ತಿರುವ ಕುರಿತು ಗೃಹ ಸಚಿವ ಪರಮೇಶ್ವರ ಅವರು, ಬಿಜೆಪಿಯವರು ಮುಂದೆ ಹೋಗುವ ಬದಲು ಹಿಂದೆ ಹೋಗುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪರಮೇಶ್ವರ ಅವರು ತಮಗೆ ಏನು ಅನಕೂಲ ಇದೆ ಅದನ್ನು ತೆಗೆದುಕೊಳ್ಳುತ್ತಾರೆ‌. ರಾಹುಲ್ ಗಾಂಧಿ, ಖರ್ಗೆಯವರ ವಿಚಾರದಲ್ಲಿ ಹಿಂದೆ ಮಾಡಿರುವುದನ್ನು ಹೇಳುತ್ತಾರೆ. ಅನುಕೂಲ ಸಿಂಧುವಾಗಿ ವಾದ ಮಾಡುತ್ತಾರೆ. ತುರ್ತು ಪರಿಸ್ಥಿತಿ ಪ್ರಜಾಪ್ರಭುತ್ವದ ದೊಡ್ಡ ಅನಾಹುತ. ಅದು ಇದ್ದಿದ್ದರೆ ನಾವೂ ಇರುತ್ತಿರಲಿಲ್ಲ. ಪರಮೇಶ್ವರ ಅವರೂ ಇರುತ್ತಿರಲಿಲ್ಲ. ಅವರು ಮಾಡಿರುವ ತಪ್ಪು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

Related Posts

Leave a Reply

Your email address will not be published. Required fields are marked *