Menu

ಭರ್ತಿಗೊಂಡ ಕೆಆರ್‌ಎಸ್‌ಗೆ ನಾಳೆ ಸಿಎಂ ಬಾಗಿನ ಅರ್ಪಣೆ

ಸಾಕಷ್ಟು ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ನಾಳೆ (ಸೋಮವಾರ) ಸಿಎಂ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ. ಜೂನ್‌ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಪಡೆದ ಮೊದಲ ಸಿಎಂ ಸಿದ್ದರಾಮಯ್ಯ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಳ್ಳಲಿದ್ದಾರೆ.

ಬಾಗಿನ ಅರ್ಪಿಸುವ ಸಂಬಂಧ ಡ್ಯಾಂಗೆ ಸುಣ್ಣ ಬಣ್ಣ ಬಳಿಯುವ ಕಾರ್ಯ ಪ್ರಾರಂಭಗೊಂಡಿದೆ. ಡ್ಯಾಂ ಮೇಲೆ ಕನ್ನಡ ಬಾವುಟಗಳು ಹಾರಾಡುತ್ತಿವೆ. ಸೋಮವಾರ ಬೆಳಗ್ಗೆ ವೈದಿಕ ಭಾನುಪ್ರಕಾಶ್ ಶರ್ಮ ನೇತೃತ್ವದಲ್ಲಿ ಪೂಜೆ ನಡೆಯಲಿದೆ. ಮೊರದಲ್ಲಿ ನವ ಧಾನ್ಯ, ಅರಿಶಿಣ ಕುಂಕುಮ, ಸೀರೆ, ಬಳೆ ತುಂಬಿಸಿ 40 ಜೊತೆ ಬಾಗಿನ ಸಿದ್ಧಪಡಿಸಲಾಗಿದೆ.

Related Posts

Leave a Reply

Your email address will not be published. Required fields are marked *