Menu

ಮುಡಾ ಹಗರಣದ ಲೋಕಾಯುಕ್ತ ಬಿ ರಿಪೋರ್ಟ್‌ ಸಂಬಂಧ ಇಂದು ಕೋರ್ಟ್‌ ಆದೇಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಆರೋಪವಾಗಿ ತೀವ್ರ ವಿವಾದಕ್ಕೆ ಗ್ರಾಸವಾಗಿರುವ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಸಲ್ಲಿಕೆ ಮಾಡಿದ್ದ ಬಿ ರಿಪೋರ್ಟ್‌ಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ (ಇಂದು) ಆದೇಶ ನೀಡಲಿದೆ.

ನಾಲ್ಕು ತಿಂಗಳು ತನಿಖೆ ನಡೆಸಿದ ಲೋಕಾಯುಕ್ತ ಸಿಎಂ ಮತ್ತು ಪತ್ನಿ ಸೇರಿದಂತೆ ನಾಲ್ವರಿಗೆ ಕ್ಲೀನ್ ಚಿಟ್ ನೀಡಿತ್ತು. ಅಧಿಕಾರ ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಅಂತಿಮ ವರದಿ ಸಲ್ಲಿಸಿತ್ತು.

ಅಂತಿಮ ವರದಿ ಪ್ರಶ್ನಿಸಿದ್ದ ದೂರುದಾರ ಸ್ನೇಹಮಯಿ ಕೃಷ್ಣ ಅಂತಿಮ ವರದಿಯಲ್ಲಿ ಇರುವ ಲೋಪದೋಷಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿರುವ ನ್ಯಾಯಾಲಯ ಆದೇಶ ಪ್ರಕಟಿಸಲಿದೆ.

ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಬಿ ರಿಪೋರ್ಟ್ ವಿರುದ್ಧ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಇಡಿಯ ತಕರಾರು ಅರ್ಜಿ ಮಾನ್ಯತೆಯ ಅನ್ವಯ ವಾದ-ಪ್ರತಿವಾದ ನಡೆಯಲಿದೆ. ಈ ನಡುವೆ ಬಿ ರಿಪೋರ್ಟ್ ಅನ್ನು ನ್ಯಾಯಾಲಯ ಒಪ್ಪಲಿದೆಯೇ ಅಥವಾ ಮರು ತನಿಖೆಗೆ ಆದೇಶ ನೀಡುವುದೇ ಕಾದುನೋಡಬೇಕಿದೆ.

Related Posts

Leave a Reply

Your email address will not be published. Required fields are marked *