ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಆರೋಗ್ಯ ಕ್ಷೇಮ ವಿಚಾರಿಸಿದ್ದಾರೆ. ಈ ವೇಳೆ ಗೀತಾ ಶಿವರಾಜ್ ಕುಮಾರ್ ಜೊತೆಗಿದ್ದರು.
ಅನಾರೋಗ್ಯ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ತೆರಳಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ನಟ ಶಿವರಾಜ್ ಕುಮಾರ್ ಕೆಲವು ದಿನಗಳ ಹಿಂದೆ ವಾಪಸಾಗಿದ್ದಾರೆ.
ಶಿವರಾಜ್ಕುಮಾರ್ ಅವರಿಗೆ ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಸರ್ಜರಿ ಮಾಡಲಾಗಿದೆ. ಡಾ. ಮುರುಗೇಶ್ ನೇತೃತ್ವದಲ್ಲಿ ಆಪರೇಷನ್ ನಡೆದು, ಮೂತ್ರಕೋಶದಲ್ಲಿದ್ದ ಕ್ಯಾನ್ಸರ್ ಕೋಶವನ್ನು ತೆಗೆದುಹಾಕಿ ಕರುಳನ್ನು ಬಳಸಿ ಕೃತಕ ಮೂತ್ರಕೋಶವನ್ನು ರಚಿಸಲಾಗಿದೆ.