Thursday, October 23, 2025
Menu

ದೀಪಾವಳಿ ಪಟಾಕಿ: ಬೆಂಗಳೂರಿನಲ್ಲಿ 250ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಹಾನಿ

ದೀಪಾವಳಿ ಹಬ್ಬದ ಸಂಭ್ರಮ ಹೆಚ್ಚಿಸಬೇಕಿದ್ದ ಪಟಾಕಿಯಿಂದ ಬೆಂಗಳೂರಿನಲ್ಲಿ 250ಕ್ಕೂ ಹೆಚ್ಚು ಮಂದಿಯ ಕಣ್ಣಿಗೆ ಹಾನಿಯಾಗಿದೆ. ಪಟಾಕಿ ಸಿಡಿದು ಕೆಲವರು ಶಾಶ್ವತವಾಗಿ ದೃಷ್ಟಿ ಕಳೆದುಕೊಂಡಿರುವುದು ಆಘಾತಕಾರಿ ವಿಚಾರ.

ಬೆಂಗಳೂರಿನ ನಾರಾಯಣ ನೇತ್ರಾಲಯದಲ್ಲಿ 90 ಗಾಯಾಳುಗಳು ದಾಖಲಾಗಿದ್ದರೆ, ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ 37, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 35, ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 13 ಮಂದಿ, ಮೋದಿ ಆಸ್ಪತ್ರೆಯಲ್ಲಿ 3 ಮಂದಿ ಮತ್ತು ಅಗರ್ವಾಲ್​​ ಕಣ್ಣಿನ ಆಸ್ಪತ್ರೆಯಲ್ಲಿ 4 ಕೇಸ್​ಗಳು ದಾಖಲಾಗಿವೆ.

ಮಿಂಟೋ ಆಸ್ಪತ್ರೆಯ ಅಪಾರ ನಿರ್ದೇಶಕ ಡಾ ಶಶಿಧರ್​ ಮಾತನಾಡಿದ್ದು, 37 ಜನರಲ್ಲಿ 9 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 14 ಜನರಿಗೆ ತೀವ್ರ ಗಾಯವಾಗಿದೆ. 2 ಮಂದಿಗೆ ದೃಷ್ಟಿ ದೋಷ ಉಂಟಾಗಿದೆ. ಅರಸಿಕೇರೆ ಮೂಲದ 14 ವರ್ಷದ ವಿದ್ಯಾರ್ಥಿ ಕಣ್ಣುಗುಡ್ಡೆ ಒಡೆದು ದೃಷ್ಟಿ ಕಳೆದುಕೊಂಡಿದ್ದಾನೆ. ಸ್ನೇಹಿತರ ಜೊತೆ ಬಾಂಬ್ ಪಟಾಕಿ ಸಿಡಿಸಿ ಈ ಆಪತ್ತು ತಂದುಕೊಂಡಿದ್ದಾನೆ. ಪಟಾಕಿ ಸಿಡಿದ ತೀವ್ರತೆಗೆ ಕಾರ್ನಿಯ ಒಡೆದು ಮೂರು ಭಾಗವಾಗಿದೆ.

ಮಿಂಟೋ ಆಸ್ಪತ್ರೆಯಲ್ಲಿ ಒಂದು ಗಂಭೀರ ಪ್ರಕರಣ ದಾಖಲಾಗಿದೆ. 19 ವರ್ಷದ ಬಿಹಾರ್​ ಮೂಲದ ಯುವಕನ ಎಡಗಣ್ಣು ಸಂಪೂರ್ಣ ದೃಷ್ಟಿ ಕಳೆದುಕೊಂಡಿದ್ದಾನೆ. ಫ್ಲವರ್ ಪಾಟ್​​ ಸಿಡಿಸುವ ವೇಳೆ ಈ ದುರಂತ ಸಂಭವಿಸಿದ್ದು, ಯುವಕನ ಕಣ್ಣಿನ ಗುಡ್ಡೆ ಸೀಳಿದೆ. ಫ್ಲವರ್ ಪಾಟ್ ಪಟಾಕಿಯನ್ನು ಕೈಯಲ್ಲಿ ಎತ್ತಿಕೊಂಡಿದ್ದಾಗ ಸಿಡಿದು ಕಣ್ಣಿಗೆ ಹಾನಿಯುಂಟಾಗಿದೆ.

Related Posts

Leave a Reply

Your email address will not be published. Required fields are marked *