Monday, September 01, 2025
Menu

ರಷ್ಯಾ, ಉಕ್ರೇನ್‌ ಸಂಘರ್ಷ ಶೀಘ್ರ ಕೊನೆಯಾಗಿ ಶಾಂತಿ ನೆಲೆಸಲಿ: ಪ್ರಧಾನಿ ಮೋದಿ

ರಷ್ಯಾ ಮತ್ತು ಉಕ್ರೇನ್ ಎರಡೂ ದೇಶಗಳು ಶಾಂತಿಯನ್ನು ಸಾಧಿಸಲು ಮುಂದುವರಿಯಬೇಕೆಂದು ಆಶಿಸುತ್ತೇವೆ. ಈ ಸಂಘರ್ಷ ಆದಷ್ಟು ಬೇಗ ಕೊನೆಗೊಳ್ಳಬೇಕೆಂದು ಭಾರತ ಬಯಸುತ್ತದೆ. ಉಕ್ರೇನ್‌ ಮತ್ತು ರಷ್ಯಾದ ನಡುವೆ ಶಾಶ್ವತ ಶಾಂತಿಯನ್ನು ಕಂಡುಕೊಳ್ಳುವ ಮಾರ್ಗವು ಇಡೀ ಜಗತ್ತಿನ ಮಾನವೀಯತೆಯ ಕರೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಚೀನಾದ ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ ವೇಳೆ ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ದ್ವಿಪಕ್ಷೀಯ ಸಭೆ

ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆ 51.50 ರೂ. ಇಳಿಕೆ

ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ವಾಣಿಜ್ಯ ಸಿಲಿಂಡರ್‌ ಬೆಲೆಯನ್ನು ಸೆಪ್ಟೆಂಬರ್ 1 ರಿಂದ ಜಾರಿಗೆ ಬರುವಂತೆ 51.50 ರೂ. ಇಳಿಕೆ ಮಾಡಿರುವುದಾಗಿ ಹೇಳಿವೆ.  14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈಗ ದೆಹಲಿಯಲ್ಲಿ 19

ಆಫ್ಘನ್‌ನಲ್ಲಿ ಪ್ರಬಲ ಭೂಕಂಪಕ್ಕೆ 622 ಮಂದಿ ಬಲಿ, ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ

ಅಫ್ಘಾನಿಸ್ತಾನದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದ್ದು, ಕನಿಷ್ಠ 622 ಮಂದಿ ಮೃತಪಟ್ಟಿದ್ದರೆ 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಭಾನುವಾರ ರಾತ್ರಿ ಸ್ಥಳೀಯ ಕಾಲಮಾನ 11:47ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದುವು ಆಗ್ನೇಯ ಅಫ್ಘಾನಿಸ್ತಾನದಲ್ಲಿ 160 ಕಿ.ಮೀ ಆಳದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ

ಓಣಂ: ಬೆಂಗಳೂರಿನಿಂದ ಕೇರಳಕ್ಕೆ ಹೆಚ್ಚುವರಿ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಓಣಂ ಹಬ್ಬದ ಹಿನ್ನೆಲೆ ಸೆಪ್ಟೆಂಬರ್ 2 ರಿಂದ 4 ರವರೆಗೆ ಬೆಂಗಳೂರು-ಕೇರಳ ಮಧ್ಯೆ ಕೆಎಸ್‌ಆರ್‌ಟಿಸಿಯಿಂದ 90 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ. ಈ ಬಸ್‌ಗಳು ಮೈಸೂರು ರಸ್ತೆ ಮತ್ತು ಶಾಂತಿನಗರ ಬಸ್ ನಿಲ್ದಾಣ ಸೇರಿದಂತೆ ಬೆಂಗಳೂರಿನ ಪ್ರಮುಖ ಟರ್ಮಿನಲ್‌ಗಳಿಂದ ಹೊರಡಲಿವೆ. ಹಬ್ಬದ ಮುಗಿದು

ಲಕ್ನೋ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ : ಏಳು ಮಂದಿ ಸಾವು

ಲಕ್ನೋದ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರಿ ಸ್ಫೋಟದಲ್ಲಿ  ಕಾರ್ಖಾನೆ ಮಾಲೀಕ ಆಲಂ  ಸೇರಿ ಏಳು ಮಂದಿ ಮೃತಪಟ್ಟಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆತೆರಳಿ  ಬೆಂಕಿಯನ್ನು ನಿಯಂತ್ರಿಸಿದ್ದಾರೆ.  ಕಾರ್ಖಾನೆಯೊಳಗೆ ಕೆಲಸ ಮಾಡುತ್ತಿದ್ದ ಆಲಂ, ಅವರ ಪತ್ನಿ ಮತ್ತು

ಭಾರತ ಮತ್ತು ಚೀನಾ ಅಭಿವೃದ್ಧಿಯ ಪಾಲುದಾರರು: ಪ್ರಧಾನಿ ಮೋದಿ

ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಸಂಬಂಧಗಳ ಬಲಪಡಿಸುವಿಕೆ ಮತ್ತು ಮುಂದುವರಿಸುವಿಕೆ ಭಾರತದ ಬದ್ಧತೆಯಾಗಿದೆ. ಭಾರತ ಮತ್ತು ಚೀನಾ ಅಭಿವೃದ್ಧಿಯ ಪಾಲುದಾರರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟಿಯಾಂಜಿನ್‌ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ

ಮಗನಿಗೆ ಬರ್ತ್‌ ಡೇ ಗಿಫ್ಟ್‌ ಜಗಳ: ಪತ್ನಿ, ಅತ್ತೆಯ ಕೊಲೆಯಲ್ಲಿ ಅಂತ್ಯ

ದೆಹಲಿಯ ರೋಹಿಣಿಯಲ್ಲಿ ಮಗನ ಬರ್ತ್‌ಡೇ ಗಿಫ್ಟ್‌ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬ ಪತ್ನಿ ಮತ್ತು ಅತ್ತೆಯನ್ನು ಹತ್ಯೆ ಮಾಡಿದ್ದಾನೆ. ಕುಸುಮ್ ಸಿನ್ಹಾ (63) ಮತ್ತು ಮಗಳು ಪ್ರಿಯಾ ಸೆಹಗಲ್ (34) ಕೊಲೆಯಾದವರು. ಯೋಗೇಶ್‌ ಸೆಹಗಲ್ ಕೊಲೆ ಆರೋಪಿ. ಆ.28 ರಂದು ಮೊಮ್ಮಗ

ಅಮೆರಿಕ “ನಾವಿಕ” ದಲ್ಲಿ ಕೆಎಂಎಫ್‌ನ ನಂದಿನಿ ಕಲರವ

ಕನ್ನಡ ನಾಡಿನ ಹೆಮ್ಮೆಯ ಕೆಎಂಎಫ್ ನಂದಿನಿ ಬ್ರಾಂಡಿನ ಎಲ್ಲ ಉತ್ಪನ್ನಗಳನ್ನು ಅಮೆರಿಕ ದೇಶದ ಫ್ಲೋರಿಡಾದ ಲೇಕ್ ಲ್ಯಾಂಡ್ ನಲ್ಲಿ ಅಧಿಕೃತವಾಗಿ ಇಂದು ನಡೆದ ನಾವಿಕ ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು. ನಂದಿನಿ ಉತ್ಪನ್ನಗಳಾದ ಹಾಲು, ಮೊಸರು, ತುಪ್ಪ, ಸಿಹಿ ತಿಂಡಿಗಳು ಸೇರಿದಂತೆ ಎಲ್ಲಾ

`ಮಾನವ ಜಿಪಿಎಸ್’ ಖ್ಯಾತಿಯ ಬಾಗುಖಾನ್ ಹತ್ಯೆಗೈದ ಭಾರತೀಯ ಸೇನೆ

ಶ್ರೀನಗರ: ಪಾಕಿಸ್ತಾನದಿಂದ ಉಗ್ರರನ್ನು ಭಾರತದ ಗಡಿಯೊಳಗೆ ನುಸುಳಲು 100ಕ್ಕೂ ಅಧಿಕ ಬಾರಿ ಸಹಾಯ ಮಾಡಿದ್ದ `ಮಾನವ ಜಿಪಿಎಸ್’ ಎಂದೇ ಖ್ಯಾತಿ ಪಡೆದಿದ್ದ ಉಗ್ರ ಬಾಗು ಖಾನ್ ನನ್ನು ಭಾರತೀಯ ಸೇನೆ ಜಮ್ಮು ಕಾಶ್ಮೀರದಲ್ಲಿ ಎನ್ ಕೌಂಟರ್ ಮಾಡಿದೆ. 1995ರಿಂದ ಜಮ್ಮು ಕಾಶ್ಮೀರದ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ: ಒಂದೇ ಕುಟುಂಬದ 7 ಮಂದಿ ಸೇರಿ 11 ಜನ ಸಾವು

ರಾಂಬನ್ (ಜಮ್ಮು ಕಾಶ್ಮೀರ): ಕಣಿವೆ ನಾಡು ಜಮ್ಮು ಮತ್ತು ಕಾಶ್ಮೀರದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕಾಶ್ಮೀರದ ಅವಳಿ ಜಿಲ್ಲೆಗಳಲ್ಲಿ ಶನಿವಾರ ಮುಂಜಾನೆ ಭೂಕುಸಿತ ಮತ್ತು ಮೇಘಸ್ಫೋಟದಿಂದ ದಿಢೀರ್ ಪ್ರವಾಹ ಸಂಭವಿಸಿದೆ. ಪ್ರಕೃತಿಯ ವಿಕೋಪದ ಪ್ರತ್ಯೇಕ ಘಟನೆಗಳಲ್ಲಿ ದಂಪತಿ, ಐವರು ಮಕ್ಕಳು ಸೇರಿ