Menu

ಭಾರತ-ಕೆನಡಾ ನಡುವೆ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಕುರಿತು ಮಹತ್ವದ ದ್ವಿಪಕ್ಷೀಯ ಚರ್ಚೆ

ನವದೆಹಲಿ: ನಿರ್ಣಾಯಕ ಅಪರೂಪದ ಖನಿಜಗಳು, ಇವಿ ಚಲನಶೀಲತೆ, ಉತ್ಪಾದನೆ ಮತ್ತು ಸುಸ್ಥಿರ ಕೈಗಾರಿಕಾ ಅಭಿವೃದ್ಧಿ ಕ್ಷೇತ್ರಗಳಲ್ಲಿನ ಸಹಕಾರವನ್ನು ಬಲಪಡಿಸಲು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕೆನಡಾದ ನೈಸರ್ಗಿಕ ಸಂಪನ್ಮೂಲಗಳ ಖಾತೆ ಸಚಿವ ಟಿಮ್ ಹಾಡ್ಗಸನ್‌ ನೇತೃತ್ವದ ಉನ್ನತ ಮಟ್ಟದ ನಿಯೋಗದೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. ನವದೆಹಲಿಯ ಉದ್ಯೋಗ ಭವನದಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಉಭಯ ಸಚಿವರು, ಎರಡೂ ದೇಶಗಳ ನಡುವಿನ ಕೈಗಾರಿಕೆ ಕ್ಷೇತ್ರದಲ್ಲಿ

ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್​ ಬಾಕ್ಸ್​ ಪತ್ತೆ

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸಿದ್ದ ವಿಮಾನದ ಬ್ಲ್ಯಾಕ್​ ಬಾಕ್ಸ್​ ಪತ್ತೆಯಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ದೃಢಪಡಿಸಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಹಾಗೂ ವಿಧಿವಿಜ್ಞಾನ ಅಧಿಕಾರಿಗಳು ಬಾರಾಮತಿಯಲ್ಲಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ

ದೇಶದ ಜಿಡಿಪಿ ಶೇ 7.4, ಶೇ 6.8-7.2ರಷ್ಟು ಏರಿಕೆ ಸಾಧ್ಯತೆ: ಆರ್ಥಿಕ ಸಮೀಕ್ಷೆ ವರದಿ

ಪ್ರಸಕ್ತ ವರ್ಷದ ಆರ್ಥಿಕ ಸಮೀಕ್ಷಾ ವರದಿಯನ್ನು ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಮಂಡಿಸಿದ್ದು, ವರದಿ ಪ್ರಕಾರ ದೇಶದ ಜಿಡಿಪಿ 2025-26ರಲ್ಲಿ ಶೇ. 7.4, 2026-27ರಲ್ಲಿ ಶೇ. 6.8-7.2ರಷ್ಟು ಏರಿಕೆಯಾಗಲಿದೆ ಎಂದು ಹೇಳಲಾಗಿದೆ. ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತನಾಗೇಶ್ವರನ್ ನೇತೃತ್ವದ ತಂಡವು ಆರ್ಥಿಕ

ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್‌ ನೀಡಿ ತಂದೆ ತಾಯಿಯ ಕೊಂದ ಯುವತಿ

ಇನ್ಸ್ಟಾಗ್ರಾಂ ಸ್ನೇಹಿತನಿಗಾಗಿ ನಿದ್ರೆ ಇಂಜೆಕ್ಷನ್‌ ನೀಡಿ ತಂದೆ ತಾಯಿಯನ್ನು ನರ್ಸ್‌ ಯುವತಿ ಕೊಂದಿರುವ ಪ್ರಕರಣ ವಿಕಾರಾಬಾದ್ ಜಿಲ್ಲೆಯ ಬಂಟ್ವಾರಂ ಮಂಡಲದ ಯಾಚಾರಂ ಗ್ರಾಮದಲ್ಲಿ ನಡೆದಿದೆ. ಆರೋಪಿ ನಕ್ಕಲ ಸುರೇಖಾಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ತಾಯಿ ಲಕ್ಷ್ಮಿ (54) ಮತ್ತು ತಂದೆ ದಶರತ್

ಕೊಲಂಬಿಯಾ ಗಡಿಯಲ್ಲಿ ವಿಮಾನ ಪತನ: ಸಂಸದ ಸೇರಿ 15 ಜನ ಸಾವು

ಕೊಲಂಬಿಯಾ-ವೆನೆಜುವೆಲಾ ಗಡಿ ಸಮೀಪ ವಿಮಾನ ಪತನಗೊಂಡು ಅದರಲ್ಲಿದ್ದ ಸಂಸದ, ಸಿಬ್ಬಂದಿ ಸೇರಿದಂತೆ 15 ಜನ ಪ್ರಾಣ ಕಳೆದುಕೊಂಡಿದ್ದಾರೆ ದು ಕೊಲಂಬಿಯಾದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ. ಸರ್ಕಾರಿ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ವಿಮಾನ ಕುಕುಟಾದಿಂದ ಹೊರಟು ಓಕಾನಾದಲ್ಲಿ ಇಳಿಯುವಾಗ ನಿಯಂತ್ರಣ

ಬೆಂಗಳೂರಿನಲ್ಲಿ ಬೃಹತ್‌ ಡ್ರಗ್ ಜಾಲ: ಕೇರಳ ಪೆಡ್ಲರ್ಸ್‌ ಸೇರಿ ಹತ್ತು ಮಂದಿ ಅರೆಸ್ಟ್‌

ಬೆಂಗಳೂರಿನಲ್ಲಿ ಬೃಹತ್ ಡ್ರಗ್ ಜಾಲವೊಂದನ್ನು ಅಮೃತಹಳ್ಳಿ ಪೊಲೀಸರು ಭೇದಿಸಿದ್ದಾರೆ. ಕೇರಳ ಮೂಲದ 7 ಡ್ರಗ್ ಪೆಡ್ಲರ್ಸ್ ಸೇರಿದಂತೆ ಹತ್ತು ಆರೋಪಿಗಳನ್ನು ಅರೆಸ್ಟ್‌ ಮಾಡಿದ್ದಾರೆ. ಬಂಧಿತರಿಂದ ನಾಲ್ಕು ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಥೈಲ್ಯಾಂಡ್‌ನಿಂದ ವಿಮಾನದ ಮೂಲಕ ಡ್ರಗ್ಸ್ ತರಿಸಿಕೊಂಡು

ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರದಿದ್ದರೆ ವಿನಾಶಕಾರಿ ದಾಳಿ: ಇರಾನ್‌ಗೆ ಟ್ರಂಪ್‌ ಬೆದರಿಕೆ

ಇರಾನ್ ತನ್ನ ಪರಮಾಣು ಮಹತ್ವಾಕಾಂಕ್ಷೆಗಳನ್ನು ತ್ಯಜಿಸಿ ಅಣು ನಿಶಸ್ತ್ರೀಕರಣ ಒಪ್ಪಂದಕ್ಕೆ ಬರಲು ಸಮಯ ಮೀರುತ್ತಿದೆ, ಒಪ್ಪಂದಕ್ಕೆ ಬರದಿದ್ದರೆ ಮುಂದಿನ ದಾಳಿ ತುಂಬಾ ಕೆಟ್ಟದಾಗಿ ಮತ್ತು ವಿನಾಶಕಾರಿಯಾಗಿರಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಮತ್ತೊಮ್ಮೆ ಬೆದರಿಕೆಯೊಡ್ಡಿದ್ದಾರೆ. ಟ್ರೂತ್ ಸೋಷಿಯಲ್’ ಪ್ಲಾಟ್‌ಫಾರ್ಮ್‌ನಲ್ಲಿ

ವಾಟ್ಸಾಪ್‌ಗೂ ಇನ್ಮುಂದೆ ಸಬ್‌ಸ್ಕ್ರಿಪ್ಷನ್?

ವಾಟ್ಸಾಪ್ ಬಳಕೆದಾರರಿಗೆ ಇಷ್ಟು ದಿನ ಸಂಪೂರ್ಣವಾಗಿ ಉಚಿತವಾಗಿ ಸಿಗುತ್ತಿದ್ದ ಮೆಸೇಜಿಂಗ್ ಸೇವೆಗೆ ಇನ್ನು ಮುಂದೆ ಹಣ ಪಾವತಿಸಬೇಕಾದ ದಿನಗಳು ದೂರವಿಲ್ಲ. ಡೇಟಾ ರೀಚಾರ್ಜ್‌ ಜೊತೆಗೆ ಮಾಸಿಕ ಸಬ್‌ಸ್ಕ್ರಿಪ್ಷನ್‌  ಬಗ್ಗಯೂ ಯೋಚಿಸಬೇಕಾಗುತ್ತದೆ. ಮಾರ್ಕ್ ಜುಕರ್‌ಬರ್ಗ್ ನೇತೃತ್ವದ ಮೆಟಾ ವಾಟ್ಸಾಪ್ ಮೂಲಕ ಆದಾಯ ಗಳಿಸಲು

ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರ ಸಾವು

ಮುಂಬೈನಿಂದ ಬಾರಾಮತಿಗೆ ಹೊರಟಿದ್ದ ವಿಮಾನ ಇಂದು ಬೆಳಗ್ಗೆ ಪತನಗೊಂಡು ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಅಜಿತ್ ಪವಾರ್ ಬಳಸುತ್ತಿದ್ದ ವಿಮಾನವು

ಇಂದಿನಿಂದ ಸಂಸತ್‌ ಬಜೆಟ್‌ ಅಧಿವೇಶನ

ಸಂಸತ್‌ ಬಜೆಟ್‌ ಅಧಿವೇಶನ ಇಂದು ಆರಂಭಗೊಳ್ಳುತ್ತಿದ್ದು, ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.  ಬಜೆಟ್‌ ಅಧಿವೇಶನವು ಜನವರಿ 28ರಿಂದ ಫೆಬ್ರವರಿ 13 ಮತ್ತು ಮಾರ್ಚ್ 9ರಿಂದ ಏಪ್ರಿಲ್ 2ರವರೆಗೆ ನಡೆಯಲಿದೆ. ಜನವರಿ 31 ರಂದು ಆರ್ಥಿಕ ಸಮೀಕ್ಷೆ