10 ವರ್ಷಗಳ ಹಿಂದೆ ಆರಂಭವಾದ ಸಿಎಂ ಸಿದ್ದರಾಮಯ್ಯನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರಿಯುತ್ತಲೇ ಇದೆ. ಜಾತಿ ಗಣತಿ ಎಂದು ಈಗ ಮತ್ತೊಮ್ಮೆ ಕನ್ನಡಿಗರ ಬೆವರಿನ ತೆರಿಗೆ ಹಣವನ್ನ ವಿನಾಕಾರಣ ದುಂದುವೆಚ್ಚ ಮಾಡಿ ಅಪವ್ಯಯ ಮಾಡಬೇಡಿ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಕಿಡಿ ಕಾರಿದ್ದಾರೆ.
ನಿಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲ ಜಾತಿ ಜನಗಣತಿಯ ಕಾರ್ಡ್ ಬಳಸಿ ಪರಿಶಿಷ್ಟ ಸಮುದಾಯಗಳಿಗೆ, ಹಿಂದುಳಿದ ವರ್ಗಗಳಿಗೆ ಯಾಕೆ ಅಪಮಾನ ಮಾಡು ತ್ತೀರಿ ಮುಖ್ಯಮಂತ್ರಿಗಳೇ ಎಂದು ಅಶೋಕ್ ಪ್ರಶ್ನಿಸಿದ್ದು, ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ವರದಿ ಎಂಬ ಮಂಕು ಬೂದಿ ಎರಚಿ ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡೋ ಕುತಂತ್ರ ಈಗ ಗುಟ್ಟಾಗಿ ಏನು ಉಳಿದಿಲ್ಲ. ಸಾಕು ಮಾಡಿ ನಿಮ್ಮ ನಾಟಕ ಎಂದಿದ್ದಾರೆ.
10 ವರ್ಷಗಳ ಹಿಂದೆ ಆರಂಭವಾದ ಸಿಎಂ @siddaramaiah ನವರ ಜಾತಿ ಜನಗಣತಿ ಎಂಬ ಬೃಹನ್ನಾಟಕ ಮೆಗಾ ಸೀರಿಯಲ್ ರೀತಿ ಇನ್ನೂ ಮುಂದುವರೆಯುತ್ತಲೇ ಇದೆ.
ನಿಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲ
ಜಾತಿ ಜನಗಣತಿಯ ಕಾರ್ಡ್ ಬಳಸಿ ಪರಿಶಿಷ್ಟ ಸಮುದಾಯಗಳಿಗೆ, ಹಿಂದುಳಿದ ವರ್ಗಗಳಿಗೆ ಯಾಕೆ ಅಪಮಾನ ಮಾಡುತ್ತೀರಿ ಮುಖ್ಯಮಂತ್ರಿಗಳೇ?ತಮ್ಮ ಕುರ್ಚಿಗೆ ಕಂಟಕ… pic.twitter.com/TIwx1uAIV8
— R. Ashoka (@RAshokaBJP) June 11, 2025
ಸಾಂಆಜಿಕ ಮಾಧ್ಯಮ ಎಕ್ಸ್ನಲ್ಲಿ ದಶವಾರ್ಷಿಕ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿಯನ್ನೂ ಸೇರಿಸಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್ಡಿಎ ಸರ್ಕಾರ ಈಗಾಗಲೇ ನಿರ್ಧಾರ ಮಾಡಿದೆ ಎಂದು ಹೇಳಿದ್ದಾರೆ.