Menu

ಬೆಂಗಳೂರು-ಜರ್ಮನಿ ಕೌಶಲ್ಯ ಸೇತುವೆ ಯೋಜನೆಗೆ ಡಾ. ಶರಣಪ್ರಕಾಶ್‌ ಪಾಟೀಲ್‌ ಚಾಲನೆ

sharanu prakash patil

ಫ್ರಾಂಕ್‌ಫರ್ಟ್ (ಜರ್ಮನಿ): ಕರ್ನಾಟಕದ ಕೌಶಲ್ಯಪೂರ್ಣ ಯುವಕರು ಜರ್ಮನಿಯಲ್ಲಿ ಉದ್ಯೋಗವನ್ನು ಹಾಗೂ ರಚನಾತ್ಮಕ, ಗೌರವಾನ್ವಿತ ನೆಲೆ ಕಂಡುಕೊಳ್ಳಲು ಯೋಜನೆ ರೂಪಿಸಲಾಗಿದೆ. ಇದೊಂದು ಮಹತ್ವದ ಕೌಶಲ್ಯ ಸೇತುವೆ ಯೋಜನೆಯಾಗಿದೆ (ಸ್ಕಿಲ್ಸ್ ಬ್ರಿಡ್ಜ್ ನೆಟ್‌ವರ್ಕ್) ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್‌. ಪಾಟೀಲ್ ತಿಳಿಸಿದ್ದಾರೆ.

ಜರ್ಮನಿ ಪ್ರವಾಸ ಕೈಗೊಂಡಿರುವ ಸಚಿವರು, ಫ್ರಾಂಕ್‌ಫರ್ಟ್‌ನಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಬೆಂಗಳೂರು-ಜರ್ಮನಿ ಕೌಶಲ್ಯ ಸೇತುವೆ ಯೋಜನೆಗೆ ಚಾಲನೆ ನೀಡಿದ ನಂತರ ಭಾಷಣ ಮಾಡಿದರು.

ರಾಜ್ಯ ಸರ್ಕಾರವು ಸ್ಕಿಲ್ಸ್ ಬ್ರಿಡ್ಜ್ ನೆಟ್‌ವರ್ಕ್ ಅನ್ನು ಪ್ರಾರಂಭಿಸಿದೆ – ಇದು ಕರ್ನಾಟಕದ ಪ್ರಮುಖ ಸರ್ಕಾರಿ ಉಪಕರಣ ಮತ್ತು ತರಬೇತಿ ಕೇಂದ್ರ (GTTC) ಮತ್ತು ಜರ್ಮನ್ ವೃತ್ತಿಪರ ಸಂಸ್ಥೆಗಳು ಮತ್ತು ಉದ್ಯೋಗದಾತರ ನಡುವಿನ ದೀರ್ಘಕಾಲೀನ ದ್ವಿಪಕ್ಷೀಯ ಪಾಲುದಾರಿಕೆಯಾಗಿದೆ ಎಂದು ತಿಳಿಸಿದ್ದಾರೆ.

“ಇದು ಒಂದು ಬಾರಿಯ ತಾತ್ಕಾಲಿಕ ಅಥವಾ ಪ್ರಾಯೋಗಿಕ ಯೋಜನೆಯಲ್ಲ. ಇದೊಂದು ದೀರ್ಘಾವಧಿಯ ಪಾಲುದಾರಿಕೆಯ ಕ್ರಮವಾಗಿದೆ. ನಾವು ಇದನ್ನು ಬೆಂಗಳೂರು-ಜರ್ಮನಿ ಕೌಶಲ್ಯ ಸೇತುವೆ ಎಂದು ಕರೆಯುತ್ತೇವೆ” ಎಂದು ಡಾ. ಪಾಟೀಲ್ ಹೇಳಿದರು.

ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿ ತರಬೇತಿ ಮತ್ತು ಸಂಪೂರ್ಣ ಪಾರದರ್ಶಕತೆ, ಸುರಕ್ಷತೆ ಮತ್ತು ಘನತೆಯೊಂದಿಗೆ ಜರ್ಮನಿಗೆ ವಲಸೆ ಹೋಗಲು ಅನುವು ಮಾಡಿಕೊಡುತ್ತದೆ. ನಮ್ಮ ಯುವಕರು ಜರ್ಮನಿಯಲ್ಲಿರುವ ಕಂಪನಿ ಅಥವಾ ಇತರೆ ಸಂಸ್ಥೆ ಅಥವಾ ಆಸ್ಪತ್ರೆಗಳಿಗೆ ಆತ್ಮವಿಶ್ವಾಸದಿಂದ ಹೆಜ್ಜೆ ಇರಿಸಬೇಕು ಎಂಬುದು ನಮ್ಮ ಆಶಯವಾಗಿದೆ. ಇದಕ್ಕಾಗಿ ನಮ್ಮ ಸರ್ಕಾರ ಮಹತ್ವದ ಯೋಜನೆ ಜಾರಿಗೆ ತಂದಿದೆ ಎಂದು ಫ್ರಾಂಕ್‌ಫರ್ಟ್‌ನಲ್ಲಿ ನೆಲೆಸಿರುವ ಕನ್ನಡಿಗರಿಗೆ ತಿಳಿಸಿದರು.

ಜರ್ಮನಿಯಲ್ಲಿರುವ ಕನ್ನಡಿಗರಿಗೆ ಸಚಿವರ ಮನವಿ

ಕರ್ನಾಟಕದಿಂದ ಬರುವ ಯುವ ಸಮುದಾಯಕ್ಕೆ ಭಾವನಾತ್ಮಕ ಮತ್ತು ಸಾಂಸ್ಕೃತಿಕ ಬೆಂಬಲವನ್ನು ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಆರೋಗ್ಯ ರಕ್ಷಣೆ, ಸಾರಿಗೆ, ಮೆಕಾಟ್ರಾನಿಕ್ಸ್ ಮತ್ತು ಉತ್ಪಾದನೆ ಸೇರಿದಂತೆ ಕೈಗಾರಿಕೆ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ಕೆಲಸಗಾರರಿಗೆ ಜರ್ಮನಿಯಲ್ಲಿ ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ನಾವು ಸೌಲಭ್ಯಗಳನ್ನು ಒದಗಿಸುತ್ತಿದ್ದೇವೆ. ಕರ್ನಾಟಕದಲ್ಲಿ ಪ್ರತಿ ವರ್ಷ ಲಕ್ಷಾಂತರ ತರಬೇತಿ ಪಡೆದ ಯುವಕರು ಕ್ಯಾಂಪಸ್‌ಗಳಿಂದ ಬರುತ್ತಿದ್ದಾರೆ. ವಿಶ್ವದರ್ಜೆಯ ಕೌಶಲ್ಯಗಳನ್ನು ಪಡೆದು, ಅವಕಾಶಗಳನ್ನು ಬಳಸಿಕೊಳ್ಳಬೇಕಾದ ಸಮಯ ಇದಾಗಿದೆ ಎಂದು ಸಚಿವ ಪಾಟೀಲ್‌ ವಿವರಿಸಿದರು.

Related Posts

Leave a Reply

Your email address will not be published. Required fields are marked *