Menu
12

ಬಕೆಟ್ ನಲ್ಲಿ ಮುಳುಗಿಸಿ ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆ

ಸ್ಪರ್ಧತ್ಮಕ ಜಗತ್ತಿನಲ್ಲಿ ಓದುವುದರಲ್ಲಿ ಹಿಂದುಳಿದಿದ್ದ ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡ ತಂದೆ ಇಬ್ಬರು ಮಕ್ಕಳನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

ಕಾಕಿನಾಡ ಜಿಲ್ಲೆಯ ಪಶ್ಚಿಮ ಗೋದಾವರಿ ಜಿಲ್ಲೆಯ ತಡೆಪಲ್ಲಿಗುಡೇನಿ ಮೂಲದ ವನಪಲ್ಲಿ ಈ ಘಟನೆ ನಡೆದಿದೆ.

ಒಎನ್ಜಿಸಿ ಕಚೇರಿಯಲ್ಲಿ ಸಹಾಯಕ ಲೆಕ್ಕಪತ್ರಗಾರರಾಗಿ ಕೆಲಸ ಮಾಡುತ್ತಿದ್ದ ಚಂದ್ರ ಶೇಖರ್ ತನ್ನ ಇಬ್ಬರು ಮಕ್ಕಳನ್ನು ಕೈಕಾಲು ಕಟ್ಟಿ ಬಕೆಟ್ ನಲ್ಲಿ ಮುಳುಗಿಸಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇಬ್ಬರು ಮಕ್ಕಳ ಬಗ್ಗೆ ಅತಿಯಾದ ಕನಸು ಕಂಡಿದ್ದ ಚಂದ್ರ ಶೇಖರ್ ಪ್ರತೀ ಬಾರಿ ಅವರು ಪರೀಕ್ಷೆಯಲ್ಲಿ ಪಡೆಯುತ್ತಿದ್ದ ಅಂಕವನ್ನು ಕಂಡು ಅಸಮಾಧಾನಗೊಂಡಿದ್ದ. ಈ ಬಗ್ಗೆ ಹಲವು ಬಾರಿ ಮನೆಯಲ್ಲಿ ಗಲಾಟೆ ನಡೆದಿದೆ.

ಕಳೆದ ವರ್ಷ ಮಕ್ಕಳಿಗೆ ೨ ಲಕ್ಷ ಫೀಸ್ ಕಟ್ಟಿದ್ದು, ಈ ಬಾರಿಯೂ ದೊಡ್ಡ ಮೊತ್ತ ಕಟ್ಟಲು ಸಾಕಷ್ಟು ಪರದಾಟ ನಡೆಸಿದ್ದ. ಸ್ಪರ್ಧಾತ್ಮಕ ಜಗತ್ತಿನ ಒತ್ತಡವನ್ನು ನಿಭಾಯಿಸಲು ಮಕ್ಕಳಿಗೆ ಸಾಧ್ಯವಿಲ್ಲ ಎಂದು ಈ ಕೃತ್ಯಕ್ಕೆ ಮುಂದಾಗಿದ್ದಾನೆ.

ಹೋಳಿ ಹಬ್ಬದ ಸಂದರ್ಭದಲ್ಲಿ, ಚಂದ್ರಕಿಶೋರ್ ತಮ್ಮ ಪತ್ನಿ ತನುಜಾ ಮತ್ತು ಇಬ್ಬರು ಪುತ್ರರಾದ ಜೋಶಿಲ್ ಮತ್ತು ನಿಖಿಲ್ ಅವರೊಂದಿಗೆ ತಮ್ಮ ಕಚೇರಿಗೆ ಹೋಗಿದ್ದರು. ಮಕ್ಕಳನ್ನು ಸಮವಸ್ತ್ರದ ಅಳತೆಗಳನ್ನು ತೆಗೆದುಕೊಳ್ಳಲು ಟೈಲರ್ ಬಳಿ ಕರೆದೊಯ್ಯುತ್ತಿರುವುದಾಗಿ ಪತ್ನಿಗೆ ತಿಳಿಸಿ ಕಚೇರಿಯಲ್ಲಿಯೇ ಇರಲು ತಿಳಿಸಿದ್ದಾನೆ.

ಚಂದ್ರಕಿಶೋರ್ ಇಬ್ಬರು ಮಕ್ಕಳನ್ನು ನೇರ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಇಬ್ಬರು ಮಕ್ಕಳನ್ನು ಮನೆಗೆ ಕರೆದೊಯ್ದ ನಂತರ, ಚಂದ್ರಕಿಶೋರ್ ಅವರ ಕೈಕಾಲುಗಳನ್ನು ಕಟ್ಟಿ, ತಲೆಗಳನ್ನು ನೀರು ತುಂಬಿದ ಬಕೆಟ್ಗಳಲ್ಲಿ ಮುಳುಗಿಸಿ ಕೊಂದಿದ್ದಾನೆ. ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Related Posts

Leave a Reply

Your email address will not be published. Required fields are marked *