ರಾಸಾಯನಿಕ ವಸ್ತು ಬಳಸಿ ನಕಲಿ ಹಾಲು ತಯಾರಿಸಿ ಮಾರಾಟ ಮಾಡುತ್ತಿದ್ದ ಅಡ್ಡೆ ಮೇಲೆ ಕೆಜಿಎಫ್ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ದಿಲೀಪ್, ಬಾಲರಾಜ್, ವೆಂಕಟೇಶಪ್ಪ, ಬಾಲಾಜಿ ಮತ್ತು ಮನೋಹರ್ ಬಂಧಿತರು ಎಂದು ಗುರುತಿಸಲಾಗಿದೆ. ಈ ಗ್ಯಾಂಗ್ ಕೆಜಿಎಫ್ ತಾಲೂಕಿನ ಬಳ್ಳಗೆರೆ ಗ್ರಾಮದ ಬಳಿ ಅಕ್ರಮ ಕಲಬೆರಕೆ ಹಾಲು ತಯಾರಿಸುತ್ತಿದ್ದರು. 22 ಲಕ್ಷ ರೂ. ಮೌಲ್ಯದ ಉಪಕರಣ ಹಾಗೂ ಕಲಬೆರಕೆಗೆ ಬಳಸುತ್ತಿದ್ದ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪಾಮ್ ಆಯಿಲ್, ಮಿಲ್ಕ್ ಪೌಡರ್, ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ಪುಷ್ಟಿ ಪೌಡರ್, ಲಡ್ಡು, ಹಾಲಿನ ಕ್ಯಾನ್ಗಳು, ಎರಡು ಲಗೇಜ್ ಆಟೋಗಳನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಲಾದ ವಸ್ತುಗಳನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.


