Menu

Accident deaths- ದಕ್ಷಿಣಕನ್ನಡದಲ್ಲಿ ರಸ್ತೆ ಅಪಘಾತಕ್ಕೆ ಐವರು ಬಲಿ

ದಕ್ಷಿಣ ಕನ್ನಡದ ತಲಪಾಡಿ ಟೋಲ್ ಗೇಟ್ ಬಳಿ ನಡೆದ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕೆಸಿ ರೋಡ್‌ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಕೆಸಿ ರೋಡ್‌ನ ಐವರು ಪ್ರಾಣ ಕಳೆದುಕೊಂಡಿದ್ದಾರೆ.

ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎಂದು ಹೇಳಲಾಗಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಬಸ್ಸು ಕಾಸರಗೋಡಿನಿಂದ ಮಂಗಳೂರು ಬಸ್ ನಿಲ್ದಾಣಕ್ಕೆ ಬರುತ್ತಿತ್ತು. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.

Related Posts

Leave a Reply

Your email address will not be published. Required fields are marked *