Tuesday, September 02, 2025
Menu

ಧರ್ಮಸ್ಥಳ ಪ್ರಕರಣದಲ್ಲಿ ಫಾರಿನ್‌ ಫಂಡ್‌ ಆರೋಪ: ತನಿಖೆಗೆ ಮುಂದಾದ ಇಡಿ

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಿಂದ ಹಣಕಾಸು ವ್ಯವಹಾರ ನಡೆದಿರುವ ಆರೋಪ ಕೇಳಿ ಬಂದಿರುವ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಮುಂದಾಗಿದೆ. ವಿದೇಶಿ ಎನ್‌ಜಿಒಗಳಿಂದ ಹಣ ಬಂದಿದೆಯೇ ಎಂಬ ವಿಚಾರ ತಿಳಿಯಲು ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್​ ಗಳ ಬಗ್ಗೆ ಇಡಿ ಮಾಹಿತಿ ನೀಡುವಂತೆ ಬ್ಯಾಂಕ್​​ಗೆ ಪತ್ರದ ಮೂಲಕ ಮನವಿ ಮಾಡಿದೆ.

ಕಾನೂನು ಬಾಹಿರವಾಗಿ ಹಣ ಬಂದಿರುವ ಆರೋಪದ ಕಾರಣ ಇಡಿ ಅಧಿಕಾರಿಗಳು ಕಳೆದ 5 ವರ್ಷಗಳ ಟ್ರಾನ್ಸ್​ಕ್ಷನ್ ನೀಡುವಂತೆ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ. ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಸಂಬಂಧಿಸಿದ ಆಖಲೆಗಳು, ವಿದೇಶದಿಂದ ಹಣ ಬಂದಿದ್ದರೆ ಯಾವ ಕಾರಣಕ್ಕೆ ಎಂಬುದನ್ನು ತಿಳಿಸುವಂತೆ ಬ್ಯಾಂಕ್​ ಗಳಿಗೆ ಇಡಿ ಅಧಿಕಾರಿಗಳು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್​ಗಳಿಗೆ ವಿದೇಶಗಳಿಂದ ಹಣ ಸಂದಾಯವಾಗುತ್ತಿದೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕು ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದರು.

Related Posts

Leave a Reply

Your email address will not be published. Required fields are marked *