Menu

ಶ್ರೀರಂಗಪಟ್ಟಣದಲ್ಲಿ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲು

ಬಟ್ಟೆ ತೊಳೆಯುವಾಗ ಕಾಲು ಜಾರಿ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ನಾಲ್ವರು ಮಕ್ಕಳು ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಮಂಡ್ಯ ಕೊಪ್ಪಲು ಬಳಿ ನಡೆದಿದೆ.  ಇಬ್ಬರು ಬಾಲಕಿಯರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರಿಗಾಗಿ ಹುಡುಕಾಟ ಮುಂದುವರಿದಿದೆ.

ನೀರಿನಲ್ಲಿ ಮುಳುಗಿದ್ದ ಬಾಲಕಿಯನ್ನು ರಕ್ಷಣೆ ಮಾಡಿದ್ದರೂ ಚಿಕಿತ್ಸೆ ಫಲಿಸದೆ ಆಕೆ (ಆಯಿಷಾ 14) ಮೃತಪಟ್ಟಿದ್ದಾಳೆ. ಆಫ್ರಿನ್ (13) ಮೃತದೇಹ ಪತ್ತೆಯಾಗಿದೆ. ನಾಪತ್ತೆಯಾಗಿರುವ ಹನಿ (14), ಥರ್ಬಿಮ್ (13)ಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಮೈಸೂರಿನ ಶಾಂತಿನಗರದ ಮದರಸದಿಂದ 15 ಮಕ್ಕಳು ಹಾಗೂ ಮೂವರು ಸಿಬ್ಬಂದಿ ಪ್ರವಾಸಕ್ಕೆ ಪ್ರವಾಸಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ಸ್ಥಳೀಯರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸಹಾಯದಿಂದ ಬಾಲಕಿಯನ್ನು ರಕ್ಷಣೆ ಮಾಡಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಮೃತಪಟ್ಟಿದ್ದಳು.

ಮದರಸದ ಬಟ್ಟೆ ತೊಳೆಯಲು ಮಕ್ಕಳನ್ನು ಕರೆದುಕೊಂಡು ಕಾವೇರಿ ಬೋರೆಯ ನಾಲೆಯ ಬಳಿಗೆ ಕರೆತರಲಾಗಿತ್ತು. ಬಟ್ಟೆ ತೊಳೆಯುವ ವೇಳೆ ಬಾಲಕಿ ಕಾಲು ಜಾರಿ ಬಿದ್ದಿದ್ದಾಳೆ. ಈ ವೇಳೆ ಆಕೆಯ ರಕ್ಷಣೆಗೆ ಮುಂದಾದ ಮೂವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.

Related Posts

Leave a Reply

Your email address will not be published. Required fields are marked *