ಬೆಂಗಳೂರು: ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ಸೇರಿದಂತೆ ನಾಲ್ವರ ಹೆಸರನ್ನು ಕಾಂಗ್ರೆಸ್ ವಿಧಾನಪರಿಷತ್ ಸ್ಥಾನಕ್ಕೆ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ.
ಮಾಸಾಂತ್ಯದಲ್ಲಿ ತೆರವಾಗಲಿರುವ ವಿಧಾನಪರಿಷತ್ ಸ್ಥಾನಗಳಿಗೆ ಕಾಂಗ್ರೆಸ್ ದಿನೇಶ್ ಅಮಿನ್ ಮಟ್ಟು, ಎನ್ ಆರ್ ಐ ಆರತಿ ಕೃಷ್ಞಾ, ದಲಿತ ಮುಖಂಡ ಡಿಜಿ ಸಾಗರ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ರಮೇಶ್ ಬಾಬು ಅವರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ.
ಪ್ರಜಾವಣಿ ಪತ್ರಿಕೆ ಸಂಪಾದಕರಾಗಿದ್ದ ದಿನೇಶ್ ಅಮಿನ್ ಮಟ್ಟು ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದರು.