Menu

ಆರ್ ಸಿಬಿಯ ನಾಲ್ವರಿಗೆ ಜೂ.19ರವರೆಗೆ ನ್ಯಾಯಾಂಗ ಬಂಧನ

rcb marketing head sosale

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರ್ ಸಿಬಿಯ ನಾಲ್ವರು ಸಿಬ್ಬಂದಿಗೆ ಬೆಂಗಳೂರಿನ ಎಸಿಜೆಎಂ ನ್ಯಾಯಾಲಯ ಜೂನ್ 19ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ರಾಜ್ಯ ಸರ್ಕಾರದ ಆದೇಶದ ಮೇರೆಗೆ ಗುರುವಾರ ಬೆಳಿಗ್ಗೆ ಬಂಧಿಸಲಾಗಿದ್ದ ಆರ್ ಸಿಬಿ ಮಾರ್ಕೆಟಿಂಗ್ ಮ್ಯಾನೇಜರ್ ನಿಖಿಲ್ ಸೊಸ್ಲೆ ಮತ್ತು ಸುಮಂತ್, ಆರ್ ಸಿಬಿ ಇವೆಂಟ್ ಮ್ಯಾನೆಜ್ ಮೆಂಟ್ ಸಂಸ್ಥೆಯಾದ ಡಿಎನ್ ಎ ಕಿರಣ್ ಮತ್ತು ಸುನೀಲ್ ಮ್ಯಾಥ್ಯೂ ಅವರಿಗೆ ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ಆರ್ ಸಿಬಿ ಸಂಭ್ರಮಾಚರಣೆಗೆ ಉಚಿತ ಟಿಕೆಟ್ ಘೋಷಿಸಿ ವೆಬ್ ಸೈಟ್ ನಲ್ಲಿ ಪ್ರಕಟಿಸಿ ನಂತರ ಡಿಲಿಟ್ ಮಾಡಿದ ಕಾರಣ ನಿರೀಕ್ಷೆಗೂ ಮೀರಿ ಅಭಿಮಾನಿಗಳು ಸೇರಿದ್ದರು. ಇದರಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Related Posts

Leave a Reply

Your email address will not be published. Required fields are marked *