ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತದಿಂದ ರಾಜ್ಯದಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮುಂದಿನ ಐದು ದಿನ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.