Menu

ರಾಜ್ಯದ ಕರಾವಳಿಯಲ್ಲಿ ಮೇ 25ರಿಂದ ಭಾರಿ ಮಳೆ,ರೆಡ್ ಅಲರ್ಟ್

ರಾಜ್ಯದಲ್ಲಿ ಎರಡು ದಿನ ವಿರಾಮ ಪಡೆದಿರುವ ಮಳೆ  ಮತ್ತೆ ಸುರಿಯುವ ಲಕ್ಷಣವಿದ್ದು, ಕರಾವಳಿಯಲ್ಲಿ ಮೇ 25ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿಯಲ್ಲಿ ಕೂಡ  ಇಂದು ಹೆಚ್ಚು ಮಳೆ ಯಾಗುವ ಮುನ್ಸೂಚನೆ ಇದ್ದು,  ಈ ಜಿಲ್ಲೆಗಳಲ್ಲಿ  ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.   ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರಕ್ಕೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ,ಚಿಕ್ಕಬಳ್ಳಾಪುರ ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲಿ ಒಣಹವೆ ಇದೆ. ಮೇ 25ರ ಬಳಿಕ ಎಲ್ಲಾ ಜಿಲ್ಲೆಗಳಲ್ಲಿ ಮಳೆ ಜೋರಾಗುವ ಸಾಧ್ಯತೆ ಇದೆ.

Related Posts

Leave a Reply

Your email address will not be published. Required fields are marked *