Menu
12

ರನ್ಯಾ ಪತಿ ಜತಿನ್ ವಿರುದ್ಧ‌ ಬಲವಂತದ ಕ್ರಮ ಬೇಡ: ಹೈಕೋರ್ಟ್ ಸೂಚನೆ

ranya rao husband

ಬೆಂಗಳೂರು: ವಿದೇಶದಿಂದ ಅಕ್ರಮ ಚಿನ್ನ ಸಾಗಾಣೆ ಸಂಬಂಧ ಬಂಧಿತ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾ ರಾವ್ ​ ಪತಿ ಜತಿನ್ ಹುಕ್ಕೇರಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿರುವ ಹೈಕೋರ್ಟ್​ ಈ ಸಂಬಂಧದ ಅರ್ಜಿ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿದೆ.

ಆರೋಪಿ ರನ್ಯಾ ರಾವ್ ಪತಿ ಜತಿನ್ ಹುಕ್ಕೇರಿ ಬಲವಂತದ ಕ್ರಮ ಕೈಗೊಳ್ಳದಂತೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ನ್ಯಾ.ಹೇಮಂತ್ ಚಂದನಗೌಡರ್ ಅವರಿದ್ದ ಪೀಠವು ಈ ಆದೇಶ ನೀಡಿದೆ.

ಜತಿನ್ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದು, ಯಾವಾಗ ಆಕ್ಷೇಪಣೆ ಅರ್ಜಿ ಸಲ್ಲಿಕೆ ಮಾಡುತ್ತೀರಿ ಎಂದು ಜಡ್ಜ್ ಪ್ರಶ್ನಿಸಿದ್ದು, ಬರುವ ಸೋಮವಾರ ಆಕ್ಷೇಪಣೆ ಸಲ್ಲಿಸುವುದಾಗಿ ಡಿಆರ್​ಐ ಪರ ವಕೀಲರು ಹೇಳಿದ್ದಾರೆ. ಹೀಗಾಗಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 24ಕ್ಕೆ ಮುಂದೂಡಿದ್ದು, ಬಲವಂತದ ಕ್ರಮ ಕೈಗೊಳ್ಳದಂತೆ ಸೂಚನೆ ನೀಡಿದೆ.

ಮದುವೆ ಮನಸ್ತಾಪ:

ಇನ್ನು ನವೆಂಬರ್​ನಲ್ಲಿ ರನ್ಯಾ ರಾವ್​​ರನ್ನು ಜತಿನ್ ಮದುವೆಯಾಗಿದ್ದರು. ಆದರೆ ಡಿಸೆಂಬರ್​ನಲ್ಲಿ ಮನಸ್ತಾಪ ಶುರುವಾಗಿತ್ತು. ದಾಂಪತ್ಯವೂ ಸರಿಯಾಗಿರಿಲಿಲ್ಲ ಎಂದು ಪತಿ ಜತಿನ್ ಹುಕ್ಕೇರಿ ಹೈಕೋರ್ಟ್​ಗೆ ಸಲ್ಲಿಸಿರುವ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಮದುವೆಯಾದ ಎರಡೇ ತಿಂಗಳಿಗೆ ರನ್ಯಾ ದುಬೈಗೆ ಓಡಾಟ ಶುರು ಮಾಡಿದ್ದರು. ಪದೇ ಪದೆ ರನ್ಯಾ ದುಬೈ ಪ್ರವಾಸವು ಪತಿಗೆ ಅನುಮಾನ ಬಂದು ಜಗಳವಾಗಿದೆ. ಈ ಜಗಳ ವಿಚ್ಛೇದನ ಹಂತಕ್ಕೂ ತಲುಪಿದೆ. ಹೀಗಾಗಿ ಪತಿಯೇ ಸಚಿವರೊಬ್ಬರಿಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ.

ಜತಿನ್ ಗೆ ಬಂಧನ ಭೀತಿ:

ಈ ಬಗ್ಗೆ ಪರಿಶೀಲಿಸುವಂತೆ ಡಿಆರ್‌ಐ ಅಧಿಕಾರಿಗಳಿಗೆ ಸಚಿವರು ಮಾಹಿತಿ ಕೊಟ್ಟಿದ್ದಾರೆ. ಅಲ್ಲದೇ ಜ್ಯುವೆಲ್ಲರ್ಸ್ ವ್ಯಾಪಾರಿಗಳು ಮಾಹಿತಿ ನೀಡಿರುವ ಅನುಮಾನವೂ ಇದೆ. ಈ ಮಾಹಿತಿ ಪಡೆದ ಡಿಆರ್‌ಐ ಅಧಿಕಾರಿಗಳು ರನ್ಯಾ ಮೇಲೆ ಕಣ್ಣಿಟ್ಟು ಬಂಧನ ಮಾಡಿದ್ದರು.

ರನ್ಯಾರಾವ್ ಬಂಧನದ ಬಳಿಕ ಪತಿ ಜತೀನ್ ಹುಕ್ಕೇರಿಯನ್ನೂ ಡಿಆರ್​ಐ ಅಧಿಕಾರಿಗಳು ವಿಚಾರಣೆ ಮಾಡಿದ್ದರು. ಇದರಿಂದ ಬಂಧನ ಭೀತಿಗೆ ಒಳಗಾಗಿದ್ದ ಜತೀನ್ ಹೈಕೋರ್ಟ್ ಮೆಟ್ಟಲೇರಿದ್ದರು.

ಜತಿನ್ ಹುಕ್ಕೇರಿ ಪರ ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಪತ್ನಿಯ ಮೇಲಿನ ಆರೋಪಕ್ಕೂ ಜತಿನ್​ಗೂ ಸಂಬಂಧವಿಲ್ಲ. ಮದುವೆಯಾದ ಒಂದೇ ತಿಂಗಳಿಗೆ ಇಬ್ಬರ ನಡುವೆ ಮನಸ್ತಾಪ ಇತ್ತು ಅಂತಾ ವಾದ ಮಾಡಿದ್ದರು. ಇದೀಗ ಕೋರ್ಟ್ ಕಾನೂನು ಪ್ರಕ್ರಿಯೆಯಿಲ್ಲದೇ ಬಂಧಿಸುವಂತಿಲ್ಲವೆಂದು ಆದೇಶ ನೀಡಿದೆ.

Related Posts

Leave a Reply

Your email address will not be published. Required fields are marked *