ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದ ಮುಸ್ಲಿಂ ಮತಾಂಧರ ಮೇಲಿನ ಕೇಸ್ ವಾಪಸ್ ಪಡೆಯಲು ಹೊಂಚು ಹಾಕಿದ್ದ ಕರ್ನಾಟಕದ ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಿದ್ದರಾಮಯ್ಯ ಸರ್ಕಾರದ ಓಲೈಕೆ ರಾಜಕಾರಣಕ್ಕೆ ನ್ಯಾಯಾಲಯ ಛಡಿ ಏಟು ಕೊಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸರ್ಕಾರಕ್ಕೆ ಮತ್ತೊಮ್ಮೆ ಹೈಕೋರ್ಟ್ ಛೀಮಾರಿ!
⚖️ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದ ಮುಸ್ಲಿಂ ಮತಾಂಧರ ಮೇಲಿನ ಕೇಸ್ ವಾಪಸ್ ಪಡೆಯಲು ಹೊಂಚು ಹಾಕಿದ್ದ @INCKarnataka ಸರ್ಕಾರಕ್ಕೆ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಿದ್ದರಾಮಯ್ಯ ಸರ್ಕಾರದ ಓಲೈಕೆ ರಾಜಕಾರಣಕ್ಕೆ ನ್ಯಾಯಾಲಯ ಚಡಿ ಏಟು ಕೊಟ್ಟಿದೆ.… pic.twitter.com/qFDQu9xaOI
— R. Ashoka (@RAshokaBJP) May 30, 2025
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅಶೋಕ್, ಕಾಂಗ್ರೆಸ್ ಸರ್ಕಾರದ ಅನ್ಯಾಯದ ನಡೆಗಳಿಗೆ ನ್ಯಾಯಾಲಯ ಛೀಮಾರಿ ಹಾಕುತ್ತಿರುವುದು ಇದೇ ಮೊದಲಲ್ಲ. ಚಾಮರಾಜಪೇಟೆಯಲ್ಲಿರುವ ಪಶು ಚಿಕಿತ್ಸಾಲಯಕ್ಕೆ ಬೀಗ ಹಾಕಿ ಅದನ್ನ ಅಲ್ಪಸಂಖ್ಯಾತರ ಇಲಾಖೆಗೆ ಹಸ್ತಾಂತರಿಸಲು ಹೊಂಚು ಕಾಕಿದ್ದ ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರಕ್ಕೆ ತಡೆಯಾಜ್ಞೆ ನೀಡಿ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿತ್ತು ಎಂದಿದ್ದಾರೆ.
ವಿಧಾನ ಪರಿಷತ್ ಸದಸ್ಯ ಶ್ರೀ ಸಿ.ಟಿ.ರವಿ ಅವರನ್ನು ಅಕ್ರಮವಾಗಿ ಬಂಧಿಸಿದ್ದು ತಪ್ಪು ಎಂದು ರಾಜ್ಯ ಕರ್ನಾಟಕ ಸರ್ಕಾರದ ನಿರಂಕುಶವಾದಿ ಧೋರಣೆಗೆ ಛೀಮಾರಿ ಹಾಕಿದ್ದ ಹೈಕೋರ್ಟ್, ತಕ್ಷಣಬಿಡುಗಡೆಗೊಳಿಸಿ ಎಂದು ಆದೇಶ ನೀಡಿತ್ತು. ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಿಡಿಎ ಸಂಸ್ಥೆಯನ್ನು ಭ್ರಷ್ಟಾಚಾರ, ಅವ್ಯವಸ್ಥೆಯ ಕೂಪವಾಗಿಸಿರುವ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡು ಮಾರುವೇಷದಲ್ಲಿ ಒಮ್ಮೆ ನೋಡಿಕೊಂಡು ಬನ್ನಿ, ಸುಗ್ರೀವಾಜ್ಞೆ ಮೂಲಕ ಬಿಡಿಎ ಸಂಸ್ಥೆ ಮುಚ್ಚುವುದು ಒಳ್ಳೆಯದು ಎಂದು ಛೀಮಾರಿ ಹಾಕಿತ್ತು ಎಂದು ಅಶೋಕ್ ತಿಳಿಸಿದ್ದಾರೆ.
ಸರ್ಕಾರಿ ವಸತಿ ಶಾಲೆಯಲ್ಲಿ ಓದುವ ಬಡ ಕುಟುಂಬದ ಮಕ್ಕಳನ್ನ ಮಲಗುಂಡಿಗಿಳಿಸಿದವರ ಮೇಲೆ ಕ್ರಮ ಕೈಗೊಳ್ಳದ್ದಕ್ಕೆ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ನ್ಯಾಯಾಲಯ ಛೀಮಾರಿ ಹಾಕಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದಲ್ಲಿ ಇ.ಡಿ. ಅಧಿಕಾರಿಗಳ ವಿರುದ್ಧ ಸುಳ್ಳು ಕೇಸು ದಾಖಲಿಸಿ ಕಡೆಗೆ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿತ್ತು. ಮೂಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಶನ್ ಗೆ ನೀಡಿದ್ದ ಅನುಮತಿ ವಿರುದ್ಧ ಕೋರ್ಟ್ ಮೆಟ್ಲಲೇರಿದಾಗಲೂ ಸಿದ್ದರಾಮಯ್ಯ ಸರ್ಕಾರ ಮುಖಭಂಗ ಅನುಭವಿಸಿತ್ತು. ಸಿಎಂ ಸಿದ್ದರಾಮಯ್ಯನವರೇ ನ್ಯಾಯಾಲಯಗಳ ಕೈಯಲ್ಲಿ ಛೀಮಾರಿ ಹಾಕಿಸಿಕೊಳ್ಳುವಲ್ಲಿ ನಿಮ್ಮ ಸರ್ಕಾರ ದಾಖಲೆ ಬರೆದಿದೆ. ತಾವು ರಾಜೀನಾಮೆ ನೀಡೋದಕ್ಕೆ ಇನ್ನೆಷ್ಟು ಬಾರಿ ಛೀಮಾರಿ ಹಾಕಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ.