Menu

ಚಾಮರಾಜನಗರದಲ್ಲಿ ಭೀಕರ ಅಪಘಾತ: ಮಾದಪ್ಪನ 5 ಭಕ್ತರ ದುರ್ಮರಣ

mandya accident

ಟಿಪ್ಪರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಮಾದಪ್ಪ ಭಕ್ತರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ದಾರುಣ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಸಮೀಪ ಶನಿವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಉರುಳಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ಐವರೂ ಸಹ ಮಂಡ್ಯ ಮೂಲದವರು ಎಂದು ತಿಳಿದುಬಂದಿದೆ.

ಮಾದಪ್ಪನ ಭಕ್ತರು ಕೊಳ್ಳೇಗಾಲ ಕಡೆಯಿಂದ ಮಹದೇಶ್ವರ ಬೆಟ್ಟದ ಕಡೆಗೆ ಹೋರಟಿದ್ದರು ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Posts

Leave a Reply

Your email address will not be published. Required fields are marked *