Thursday, November 20, 2025
Menu

ತಾಯಿಯೇ ಮಗಳ ಕತ್ತು ಕಡಿದ ಕೃತ್ಯದ ಹಿಂದೆ ನರಬಲಿ ಶಂಕೆ

ಬೆಂಗಳೂರು:ಪತಿಯನ್ನು ತೊರೆದು ತವರು ಮನೆಗೆ ಬಂದಿದ್ದ ಮಗಳನನ್ನು ಹೆತ್ತ ತಾಯಿಯೇ ಕುತ್ತಿಗೆ ಕಡಿದ ಕೃತ್ಯವು ಹೊಸ ತಿರುವು ಪಡೆದುಕೊಂಡಿದೆ. ತಾಯಿ ತನ್ನ ಮಗಳನ್ನು ನರಬಲಿ ಕೊಡಲು ಮುಂದಾಗಿದ್ದಳು ಎಂಬ ಶಂಕೆ ಮೂಡಿದ್ದು ಸಂಪಿಗೆಹಳ್ಳಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಸಂಪಿಗೆಹಳ್ಳಿಯ ಅಗ್ರಹಾರ ಲೇಔಟ್ ಹರಿಹರೇಶ್ವರ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ತಾಯಿ ಸರೋಜಮ್ಮ ತನ್ನ ಮಗಳು ರಮ್ಯ (22)ಳನ್ನು ದೇವಸ್ಥಾನಕ್ಕೆ ಕರೆದುಕೊಂಡು ಬಂದು ಮಚ್ಚಿನಿಂದ ಮಗಳ ಕುತ್ತಿಗೆಗೆ ಕಡಿದಿದ್ದಾಳೆ. ನಮಸ್ಕರಿಸುವಾಗ ಮಗಳ ಕುತ್ತಿಯನ್ನು ಕತ್ತರಿಸಿಸಲು ತಾಯಿ ಪ್ರಯತ್ನಿಸಿದ್ದಾಳೆ.

ರಮ್ಯಾ ಪತಿಯ ಜೊತೆ ಆನೇಕಲ್‌ನಲ್ಲಿ ವಾಸವಿದ್ದಳು. ರಮ್ಯಾಗೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಪತಿ ಸೋಮಶೇಖ‌ರ್ ಜೊತೆಗೆ ರಮ್ಯಾ ತಾಯಿ ಮನೆಗೆ ಬಂದಿದ್ದಳು. ಮೂರು ದಿನಗಳ ಹಿಂದೆ ತವರು ಮನೆಗೆ ಬಂದಿದ್ದರು. ಬೆಳಗಿನ ಜಾವ 3.45 ಗಂಟೆಗೆ ಪೂಜೆಗೆ ಮನೆಯಿಂದ ಸ್ವಲ್ಪ ದೂರ ಇರುವ ದೇವಸ್ಥಾನಕ್ಕೆ ರಮ್ಯಾಳನ್ನು ತಾಯಿ ಸುಜಾತ ಕರೆ ತಂದಿದ್ದಳು. ದೇವರಿಗೆ ನಮಸ್ಕರಿಸುವಂತೆ ಹೇಳಿದ್ದಾರೆ. ರಮ್ಯಾ ನಮಸ್ಕಾರ ಮಾಡುವಾಗ ಆಕೆಯ ಕುತ್ತಿಗೆ ಕುತ್ತಿಗೆಗೆ ಮಚ್ಚಿನಿಂದ ಕಡಿದಿದ್ದಾಳೆ. ಘಟನೆ ನಂತರ ಸ್ಥಳದಿಂದ ಪರಾರಿಯಾಗಿದ್ದು,ಆಕೆಯ ಪತ್ತೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ದೇವಸ್ಥಾನಕ್ಕೆ ಬಂದು ಬೆಳಗಿನಜಾವ ನಾಲ್ಕುಗಂಟೆಗೆ ಸುಜಾತ ಪೂಜೆ ಶುರು ಮಾಡುತ್ತಿದ್ದಳು. ಕಳೆದ ಎರಡು ಮೂರು ದಿನಗಳ ಹಿಂದಷ್ಟೇ ಮಗಳು ರಮ್ಯಾಳನ್ನ ಮನೆಗೆ ಕರೆಸಿಕೊಂಡಿದ್ದಳು. ಇಬ್ಬರೂ ಕೂಡ ಮೂರ್ನಾಲ್ಕು ದಿನಗಳಿಂದ ಪೂಜೆಗೆ ಬರುತ್ತಿದ್ದರು. ಅದರಂತೆ ಇಂದು ಬೆಳಗಿನ ಜಾವ ಕೂಡ ಇಬ್ಬರೂ ಪೂಜೆಗೆ ಬಂದಿದ್ದರು ಸಿಸಿಟಿವಿಯಲ್ಲಿ ಮಗಳೇ ಮಚ್ಚುಗಳನ್ನು ಹಿಡಿದುಕೊಂಡು ಬಂದಿದ್ದು ಪತ್ತೆಯಾಗಿದೆ. ಈ ವೇಳೆ ಇಬ್ಬರೂ ಕೂಡ ಒಬ್ಬರಿಗೊಬ್ಬರು ಹಲ್ಲೆ ಮಾಡಿಕೊಂಡಿರುವ ಶಂಕೆ ಇದೆ.

ನಮಸ್ಕರಿಸುವ ವೇಳೆ ರಮ್ಯಾ ಕುತ್ತಿಗೆಗೆ ಮಚ್ಚು ಬೀಸಿರುವ ಸುಜಾತ, ನಂತರ ರಮ್ಯಾ ಕೂಡ ಸುಜಾತ ಮೇಲೆ ಹಲ್ಲೆ ಮಾಡಿರುವ ಮಾಹಿತಿ ಇದೆ. ಹಲ್ಲೆ ಪರಿಣಾಮ ಸುಜಾತ ಹಣೆಗೆ ಗಾಯವಾಗಿದೆ. ಸುಜಾತ ಗಾಯವಾಗಿ ರಕ್ತ ಸುರಿಸಿಕೊಂಡೇ ದೇವಸ್ಥಾನದಿಂದ ಕಾಲ್ಕಿತ್ತಿದ್ದಳು. ಸುಸ್ತಾಗಿ ನೇರವಾಗಿ ಮನೆಗೆ ಹೋಗಿದ್ದ ಸುಜಾತ. ಈ ಬಗ್ಗೆ ಮಾಹಿತಿ ಪಡೆದು ಸುಜಾತಳನ್ನ ವಶಪಡೆದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಘಟನೆ ಸಂಬಂಧ ಪೊಲೀಸ್ಸಿಗೆ ಸಾಕಷ್ಟು ಅನುಮಾನ ಮೂಡಿದೆ. ಇಬ್ಬರೂ ಒಬ್ಬರಿಗೊಬ್ಬರು ಬಲಿ ಕೊಟ್ಟುಕೊಳ್ಳಲು ಮುಂದಾಗಿದ್ದಾರೆಯೇ ಎನ್ನುವ ಅನುಮಾನ ವ್ಯಕ್ತವಾಗಿದ್ದು, ಪ್ರಕರಣ ಸಂಬಂಧ ತನಿಖೆಯನ್ನು ಸಂಪಿಗೆಹಳ್ಳಿ ಪೊಲೀಸರು ತೀವ್ರಗೊಳಿಸಿದ್ದಾರೆ.

Related Posts

Leave a Reply

Your email address will not be published. Required fields are marked *