Menu

Suicide: ಬೆಂಗಳೂರಿನಲ್ಲಿ ಪತ್ನಿ ಹಣ ಕೊಡಲಿಲ್ಲವೆಂದು ನೊಂದ ಪತಿ ಆತ್ಮಹತ್ಯೆ

ಅಮೃತಹಳ್ಳಿಯ ಮರಿಯಣ್ಣನ ಪಾಳ್ಯದಲ್ಲಿ ಪತಿಯೊಬ್ಬ ಪತ್ನಿಯಲ್ಲಿ ಹಣ ಕೇಳಿದ್ದು ಆಕೆ ಕೊಡಲು ನಿರಾಕರಿಸಿದ್ದಕ್ಕೆ ಖಾಸಗಿ ಶಾಲಾ ಕಟ್ಟಡದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮಿಳುನಾಡು ಮೂಲದ ರಾಜೇಂದ್ರ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ರಾಜೇಂದ್ರ ಖಾಸಗಿ ಶಾಲೆಯ ಕಟ್ಟಡವೊಂದರಲ್ಲಿ ಕಾಮಗಾರಿ ಕೆಲಸ ಮಾಡುತ್ತಿದ್ದು, ರಾತ್ರಿ ಶಾಲಾ ಕಟ್ಟಡದಲ್ಲಿಯೇ ಮಲಗಿಕೊಳ್ಳುತ್ತಿದ್ದರು. ಪತ್ನಿಗೆ ಕರೆ ಮಾಡಿ 20 ಸಾವಿರ ರೂ. ಕೊಡುವಂತೆ ಕೇಳಿದ್ದರು. ಪತ್ನಿ ನಿರಾಕರಿಸಿದ್ದರು. ಇದರಿಂದ ನೊಂದ ಅವರು ರಾತ್ರಿ ಮದ್ಯಪಾನ ಮಾಡಿ ಶಾಲಾ ಆವರಣದಲ್ಲಿರುವ ಕಟ್ಟಡ ದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರತಿದಿನದಂತೆ ಇಸ್ಕಾನ್‌ನಿಂದ ಶಾಲೆಗೆ ಊಟ ಬಂದಿತ್ತು. ಅದನ್ನು ಇಡಲು ವಿದ್ಯಾರ್ಥಿಗಳು ಶಾಲೆ ಪಕ್ಕದಲ್ಲಿರುವ ಕಟ್ಟಡಕ್ಕೆ ತೆರಳಿದ್ದಾಗ ಆತ್ಮಹತ್ಯೆ ಮಾಡಿ ಕೊಂಡಿರುವುದು ಕಂಡು ಬಂದಿದೆ. ಶಿಕ್ಷಕರು ಶಾಲೆಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ವಾಪಸ್ ಮನೆಗೆ ಕಳುಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Posts

Leave a Reply

Your email address will not be published. Required fields are marked *