ಹಾಸನದ ಹೊಳೆನರಸೀಪುರ ತಾಲೂಕಿನ ಮಾಕವಳ್ಳಿ ಗ್ರಾಮದ ಬಳಿಪ್ರಿಯಕರನ ಜೊತೆ ಪತ್ನಿ ಪರಾರಿಯಾಗಿದ್ದಕ್ಕೆ ಮನನೊಂದ ಪತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅರಕಲಗೂಡು ತಾಲೂಕಿನ ಹೊನ್ನವಳ್ಳಿ ಗ್ರಾಮದ ರವಿ (38) ಆತ್ಮಹತ್ಯೆ ಮಾಡಿಕೊಂಡವರು. ರವಿಯ ಪತ್ನಿ ಕೆಲವು ದಿನಗಳ ಹಿಂದೆ ಗಂಡನನ್ನು ಬಿಟ್ಟು ಮಗುವಿನೊಂದಿಗೆ ಹೊನ್ನವಳ್ಳಿ ಗ್ರಾಮದ ಪ್ರದೀಪ್ ಜೊತೆ ಪರಾರಿಯಾಗಿದ್ದಳು. ಇದರಿಂದ ಮನನೊಂದ ರವಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಸರಿಯಾಗಿ ಸ್ಪಂದಿಸದ ಕಾರಣ ಎಸ್ಪಿಗೂ ದೂರು ನೀಡಿದ್ದರು.
ಪತ್ನಿ ಪರಾರಿಯಾದ ಜೊತೆ ದೂರಿಗೆ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಮನನೊಂದ ರವಿ ಮಾಕವಳ್ಳಿ ಬಳಿ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳ ರವಿಯ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿಸಿದೆ.