ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು/ಗುಟ್ಕಾ ಉಗುಳಿದರೆ, ಸಿಗರೇಟು ಸೇದಿದರೆ 1000 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ರಾಜ್ಯ ಸರ್ಕಾರ ಮಸೂದೆ ತಂದಿತ್ತು. ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ ಉತ್ಪಾದನೆ, ಸರಬರಾಜು ವಿತರಣೆಯ ವಿನಿಮಯ) (ಕರ್ನಾಟಕ ತಿದ್ದುಪಡಿ) ಮಸೂದೆ2024ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಇದೇ 23ರಂದು ಅಂಕಿತ ಹಾಕಿದರು. ಈ ಸಂಬಂಧ ರಾಜ್ಯಪತ್ರದಲ್ಲಿ ಅಧಿಸೂಚನೆ ಹೊರಡಿಸಿ, ಕಾಯ್ದೆ ಜಾರಿಗೆ ತರಲಾಗಿದೆ.
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಬೀಡಿ, ಸಿಗರೇಟು ಮತ್ತು ತಂಬಾಕಿನ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕಾಯ್ದೆ ಉಲ್ಲಂಘಿಸಿದವರಿಗೆ 1,000 ರೂ. ದಂಡ ವಿಧಿಸಲಾಗುತ್ತದೆ.
ಹೋಟೆಲ್ಗಳು, ಪಬ್, ಬಾರ್ ಅಥವಾ ರೆಸ್ಟೋರೆಂಟ್ಗಳಲ್ಲಿ ಹುಕ್ಕಾ ಸೇವೆನೆಗೂ ಅವಕಾಶ ಇಲ್ಲ. ನಿಷೇಧವನ್ನು ಉಲ್ಲಂಘಿಸಿದವರಿಗೆ 50,000 ದಿಂದ 1 ಲಕ್ಷದವರೆಗೆ ದಂಡ ಮತ್ತು ಒಂದು ವರ್ಷದಿಂದ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ.