Saturday, September 20, 2025
Menu

ದೇಗುಲಗಳಲ್ಲಿ ಸೇವಾ ಶುಲ್ಕ ಹೆಚ್ಚಳ: ಆರ್‌. ಅಶೋಕ ಕಿಡಿ

ಸಿಎಂ ಸಿದ್ದರಾಮಯ್ಯ ಅವರು ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯದ 14 ಪ್ರಮುಖ ಮುಜರಾಯಿ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಏರಿಕೆ ಮಾಡುವ ಮೂಲಕ ಹಿಂದೂಗಳಿಗೆ ಮತ್ತೊಂದು ಪೆಟ್ಟು ನೀಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಆರ್‌. ಅಶೋಕ ಅವರು, ಹಿಂದೂಗಳ ದೇವಸ್ಥಾನ, ಹಬ್ಬ, ಆಚರಣೆಗಳಿಗೆ ಅಡಚಣೆ ಉಂಟು ಮಾಡುವುದರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಅದೆಂತಹ ವಿಕೃತ ಸಂತೋಷ ಸಿಗುತ್ತೋ ಗೊತ್ತಿಲ್ಲ ಎಂದು ಬರೆದುಕೊಂಡಿದ್ದಾರೆ.

ತಾಯಿ ಚಾಮುಂಡೇಶ್ವರಿ, ತಾಯಿ ಭುವನೇಶ್ವರಿ, ನಮ್ಮ ಸಂಸ್ಕೃತಿಯ ಪ್ರತೀಕವಾದ ಹರಿಷಿಣ, ಕುಂಕುಮದ ಮೇಲೆ ನಂಬಿಕೆ ಇಲ್ಲದ ಅನ್ಯಧರ್ಮೀಯರಿಂದ ದಸರಾ ಉದ್ಘಾಟನೆ ಮಾಡಿಸುವ ಹಠ ಸಾಧಿಸಿದ್ದಾಯಿತು. ದುಬಾರಿ ಪಾಸ್ ನೆಪದಲ್ಲಿ ಜನಸಾಮಾನ್ಯರಿಗೆ ದಸರಾ ವೀಕ್ಷಣೆ ಕಷ್ಟಸಾಧ್ಯ ಮಾಡಿದ್ದಾಯ್ತು. ಈಗ ದೇವಸ್ಥಾನಗಳಲ್ಲಿ ಸೇವಾ ಶುಲ್ಕ ಹೆಚ್ಚಳ ಮಾಡಿರುವುದಾಗಿ ಕಿಡಿ ಕಾರಿದ್ದಾರೆ. ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ, ರಾಹುಲ್‌ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ಪ್ರಶ್ನಿಸಿದ್ದಾರೆ.

ಕಳೆದ ಎರಡೂವರೆ ವರ್ಷಗಳಿಂದ ಡೆಡ್ಲೈನ್ ಮೇಲೆ ಡೆಡ್ಲೈನ್ ಕೊಟ್ಟರೂ ಅಧಿಕಾರಿಗಳ ಕೈಯಲ್ಲಿ ರಸ್ತೆಗುಂಡಿ ಮುಚ್ಚಿಸಲು ವಿಫಲವಾಗಿರುವ ತಾವು ರಾಜೀನಾಮೆ ಕೊಟ್ಟು ಮನೆಗೆ ಹೋಗುವುದು ಯಾವಾಗ ಡಿಸಿಎಂ
ಡಿಕೆ ಶಿವಕುಮಾರ್‌ ಅವರೇ ಎಂದೂ ಪ್ರಶ್ನಿಸಿದ್ದಾರೆ.

Related Posts

Leave a Reply

Your email address will not be published. Required fields are marked *