ನವದೆಹಲಿ: ಗುರುವಾರ ಅಹಮದಾಬಾದ್ನಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತದಲ್ಲಿ ನಿಧನರಾದ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ವಿಮಾನ ಅಪಘಾತಗಳಲ್ಲಿ ಪ್ರಾಣ ಕಳೆದುಕೊಂಡ ಹಲವಾರು ಉನ್ನತ ಭಾರತೀಯ ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳ ಪಟ್ಟಿಗೆ ಸೇರಿದರು.
ವಾಯು ದುರಂತಗಳಲ್ಲಿ ಪ್ರಾಣ ಕಳೆದುಕೊಂಡ ಉನ್ನತ ರಾಜಕಾರಣಿಗಳು ಮತ್ತು ಪ್ರಮುಖ ವ್ಯಕ್ತಿಗಳ ಪಟ್ಟಿ ಇಲ್ಲಿದೆ:
ಹೋಮಿ ಭಾಭಾ (1966): ಭಾರತದ ಪ್ರವರ್ತಕ ಪರಮಾಣು ಭೌತಶಾಸ್ತ್ರಜ್ಞ ಹೋಮಿ ಜಹಾಂಗೀರ್ ಭಾಭಾ ಅವರು ಜನವರಿ 24, 1966 ರಂದು ಏರ್ ಇಂಡಿಯಾ ಫ್ಲೈಟ್ 101 ರಲ್ಲಿ ಸಂಭವಿಸಿದ ದುರಂತದಲ್ಲಿ ನಿಧನರಾದರು.
ಸಂಜಯ್ ಗಾಂಧಿ (1980): ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ ಜೂನ್ 23, 1980ರಂದು ಸಫ್ದರ್ಜಂಗ್ ವಿಮಾನ ನಿಲ್ದಾಣದ ಬಳಿ ದೆಹಲಿ ಫ್ಲೈಯಿಂಗ್ ಕ್ಲಬ್ ವಿಮಾನದಲ್ಲಿ ವೈಮಾನಿಕ ಸಾಹಸ ಮಾಡಲು ಪ್ರಯತ್ನಿಸುತ್ತಿದ್ದಾಗ, ನಡೆದ ದುರಂತ ಅಪಘಾತದಲ್ಲಿ ನಿಧನರಾದರು.
ಮಾಧವರಾವ್ ಸಿಂಧಿಯಾ (2001): ಹಿರಿಯ ಕಾಂಗ್ರೆಸ್ ನಾಯಕ, ಸ್ವತಃ ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದ ಮಾಧವರಾವ್ ಸಿಂಧಿಯಾ, ಸೆಪ್ಟೆಂಬರ್ 30, 2001 ರಂದು ಕಾನ್ಪುರದಲ್ಲಿ ರಾಜಕೀಯ ರ್ಯಾಲಿಯೊಂದರ ಮಾರ್ಗಮಧ್ಯೆ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾದರು.
ಜಿಎಂಸಿ ಬಾಲಯೋಗಿ (2002): ಲೋಕಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಜಿಎಂಸಿ ಬಾಲಯೋಗಿ ಅವರನ್ನು ಕರೆದೊಯ್ಯುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಮಾರ್ಚ್ 3, 2002 ರಂದು ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕೈಕಲೂರು ಬಳಿಯ ಕೊಳಕ್ಕೆ ಅಪ್ಪಳಿಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು.
ನಟಿ ಸೌಂದರ್ಯ (2004): ದಕ್ಷಿಣ ಭಾರತದ ಖ್ಯಾತ ನಟಿ ಕೆ.ಎಸ್. ಸೌಮ್ಯ (ಸೌಂದರ್ಯ ಎಂದೇ ಜನಪ್ರಿಯ) ಏಪ್ರಿಲ್ 17, 2004 ರಂದು ನಡೆದ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದರು. ಬೆಂಗಳೂರಿನಿಂದ ಕರೀಂನಗರಕ್ಕೆ ತಮ್ಮ ಸಹೋದರನೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.
ವೈ.ಎಸ್. ರಾಜಶೇಖರ ರೆಡ್ಡಿ (2009): ಆಂಧ್ರಪ್ರದೇಶದ ಆಗಿನ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ, ವೈ.ಎಸ್.ಆರ್ ಎಂದೇ ಜನಪ್ರಿಯರಾಗಿದ್ದರು, ಅವರು ಪ್ರಯಾಣಿಸುತ್ತಿದ್ದ ಬೆಲ್ 430 ಹೆಲಿಕಾಪ್ಟರ್ 2009 ರ ಸೆಪ್ಟೆಂಬರ್ 2 ರಂದು ನಲ್ಲಮಲ ಕಾಡಿನಲ್ಲಿ ಅಪಘಾತಕ್ಕೀಡಾಗಿ ನಿಧನರಾದರು.
ದೋರ್ಜಿ ಖಂಡು (2011): ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ದೋರ್ಜಿ ಖಂಡು ಮತ್ತು ಇತರ ನಾಲ್ವರು ಜನರನ್ನು 2011 ರ ಏಪ್ರಿಲ್ 30 ರಂದು ತವಾಂಗ್ನಿಂದ ಇಟಾನಗರಕ್ಕೆ ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ರಾಜ್ಯದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದರು.
ಸಿಡಿಎಸ್ ಜನರಲ್ ಬಿಪಿನ್ ರಾವತ್ (2021): ಭಾರತದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಡಿಸೆಂಬರ್ 8, 2021 ರಂದು ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು.