1,741.60 ಕೋಟಿ ರೂ. ಬಂಡವಾಳ ಹೂಡಿಕೆಯ 63 ಯೋಜನೆಗಳನ್ನು ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲು 153ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯು ಅನುಮೋದನೆ ನೀಡಿದೆ.
ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಮಿತಿ ಸಭೆಯಲ್ಲಿ, ದಕ್ಷಿಣ ಕನ್ನಡ, ತುಮಕೂರು, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 1,741.60 ಕೋಟಿ ರು. ಮೌಲ್ಯದ ಬಂಡವಾಳ ಹೂಡಿಕೆಯ 63 ಯೋಜನೆಗಳ ಅನುಷ್ಠಾನಕ್ಕೆ ಅನುಮೋದನೆ ನೀಡಲಾಗಿದೆ. ಇದರಿಂದ ನಾಲ್ಕು ಜಿಲ್ಲೆಗಳಲ್ಲಿ 12500 ಉದ್ಯೋಗ ಸೃಷ್ಟಿಯಾಗಲಿದೆ.
ಅತ್ಯಾಧುನಿಕ ಫೀಡ್ಪ್ಲ್ಯಾಂಟ್, ಪ್ರಿ-ಫ್ಯಾಬ್ರಿಕೇಟೆಡ್ ಮಾಡ್ಯುಲರ್, ಬಸ್ ಬಾಡಿ ಬಿಲ್ಡಿಂಗ್, ವೈಮಾಂತರಿಕ್ಷ ಹಾಗೂ ರಕ್ಷಣಾ ವಲಯಕ್ಕೆ ಸಂಬಂಧಿಸಿದ ಎಲೆಕ್ಟ್ರಾ ನಿಕ್ಸ್ ವ್ಯವಸ್ಥೆ ಮತ್ತು ಬಿಡಿಭಾಗ ತಯಾರಿಕಾ ಘಟಕಗಳ ಸ್ಥಾಪನೆಯ 60 ಯೋಜನೆಗಳಿಗೆ ಅನುಮೋದಿಸಲಾಗಿದೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ಮೂರು ಯೋಜನೆ ಗಳಿಗೂ ಸಭೆಯಲ್ಲಿ ಅನುಮತಿ ನೀಡಲಾಗಿದೆ. ಅನುಮೋದನೆ ನೀಡಿದ ಯೋಜನೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರಿ ತಾಲೂಕಿನಲ್ಲಿ 125.88 ಕೋಟಿ ರೂ. ವೆಚ್ಚದ ಅತ್ಯಾಧುನಿಕ ಫೀಡ್ ಪ್ಲ್ಯಾಂಟ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ 97.52 ಕೋಟಿ ರೂ. ವೆಚ್ಚದ ಪ್ರಿಫ್ಯಾಬ್ರಿಕೇಟೆಡ್ ಮಾಡ್ಯುಲರ್ ಪ್ರಾಡಕ್ಟ್ ಘಟಕ, ತುಮಕೂರು ಜಿಲ್ಲೆಯ ಹಿರೇಹಳ್ಳಿಯಲ್ಲಿ 91.2 ಕೋಟಿ ರೂ. ವೆಚ್ಚದ ಟ್ರಾನ್ಸ್ಫಾರ್ಮರ್ ರೇಡಿಯೇಟರ್ ತಯಾರಿಕಾ ಘಟಕ ಸ್ಥಾಪನೆ ಪ್ರಮುಖ ಯೋಜನೆಗಳಾಗಿವೆ.
50 ಕೋಟಿ ರೂ.ಗೂ ಹೆಚ್ಚಿನ ಮೊತ್ತದ ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ, 15ರಿಂದ 50 ಕೋಟಿ ರು. ಒಳಗಿನ 53 ಯೋಜನೆಗಳಿಗೆ ಹಾಗೂ 41.20 ಕೋಟಿ ರು. ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗಳಿಗೆ ಏಕಗವಾಕ್ಷಿ ಅನುಮೋದನಾ ಸಮಿತಿ ಅನುಮತಿ ಸಿದೆ. ಸಭೆಯಲ್ಲಿ ನಾಲ್ಕು ಬಂಡವಾಳ ಹೂಡಿಕೆ ಪ್ರಸ್ತಾವನೆ ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆ ಸೇರಿ ವಿವಿಧ ಪ್ರಸ್ತಾವನೆಗಳಿಗೆ ಅನುಮೋ ದನೆ ನೀಡಲಾಗಿದೆ.